Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...