Home / ಕಥೆ / ಕಿರು ಕಥೆ / ಹೂವಿನ ಸಂಕಲ್ಪ

ಹೂವಿನ ಸಂಕಲ್ಪ

ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು.

ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ಎಂದು ಬೆನ್ನು ತಟ್ಟಿ ಮಾತನಾಡಿಸಿತು. ಹೂವು ತನ್ನ ಧ್ಯಾನದ ನಿಲುವನ್ನು ತೊರೆಯಲಿಲ್ಲ.

ಬೆಳಕು ಬೀರುತ್ತ ಬೆಳ್ಳಿ ಕಿರಣ ಓಡಿ ಒಂದು-
“ಹೂವೇ! ಹೂವೇ! ನಿನ್ನ ಸಖನ ನೆನಪಿಲ್ಲವೇ?” ಎಂದು ಕೇಳಿತು.
ಸುಮನದ ಧ್ಯಾನದ ರೆಪ್ಪೆ ದಳ ಅಲಗಲಿಲ್ಲ.
ಧ್ಯಾನದ ಮೌನ ಮುಂದುವರಿಯಿತು.

ಮಧ್ಯಾಹ್ನ ಸೂರ್‍ಯ ನೆತ್ತಿಗೇರಿ ಬಂದು ಹೂ ಹೃದಯವನ್ನು ಕಲುಕಲು ನೋಡಿದ. ಹೂವು ಉರಿಬಿಸಲನ್ನು ಸಹಿಸಿ ಧ್ಯಾನ ಮುಂದುವರಿಸಿತು.

ಮತ್ತೆ “ಸಂಧ್ಯಾ” ಮೆಲ್ಲನೆ ಹೆಜ್ಜೆ ಇಟ್ಟು ಬಂದು “ಕಣ್ಣು ಮುಚ್ಚಾಲೆ ಆಡೋಣವೇ”? ಎಂದು ಪಿಸು ಗುಟ್ಟಿತು.

“ಮೂಕ ಮೌನ, ಮುನಿಸೇಕೆ? ಬಾ ಸಖಿ” ಎಂದು ಗೋಗರಿಯಿತು.

ಹೂವು ಕಣ್ಣು ತೆರೆಯಲಿಲ್ಲ, ಬಾಯಿ ಬಿಡಲಿಲ್ಲ. ಮೌನದಲ್ಲಿ ಮುಂದುವರಿಯಿತು.

ಸಂಜೆಗತ್ತಲೆ ತೆರೆ ಎಳೆದೊಡನೆ “ನಿಶೆ” ಕತ್ತಲೆಯ ಹೊದಿಕೆ ಹೊದ್ದು ಕಳ್ಳನಂತೆ ಹೂ ಹೃದಯ ಕದಿಯಲು ಬಂದಿತು.

“ಮೇಲೆ, ಆಗಸ, ಚಂದ್ರಮನ ಚೆಲುವು ನೋಡು, ಬೆಳದಿಂಗಳ ಹಾಡು ಕೇಳು, ನಕ್ಷತ್ರದ ನಾಟ್ಯನೋಡು. ನಿಶಾ ತೊಳಿನ ಅಪ್ಪುಗೆಗೆ ನೀ ಬರಲು ಏಕೆ ತಡ? ಸುಮನ, ನಿನ್ನ ಸಮಾಗಮಕ್ಕಾಗಿ ನಾ ಪರಿತಪಿಸುತಿರುವೆ” ಎಂದಿತು. ಹೂವಿನ ಧ್ಯಾನ, ತಪ ಹಾಗೆ ಮುಂದುವರೆದಿತ್ತು.

ಮಧ್ಯರಾತ್ರಿ ಹಿಮ ಬಿರುಗಾಳಿ ಅಪ್ಪಳಿಸಿ ಬಂತು. ಹೂವಿನ ಪಕಳೆಗಳೆಲ್ಲಾ ಉದರಿ ಮಣ್ಣು ಸೇರಿತು. ಅದರೊಡನೆ ಹೂಗರ್‍ಭದಲ್ಲಿ ಅಡಗಿದ್ದ ಧ್ಯಾನ ಬೀಜ ಮೃಣ್ಮಯವ ಸೇರಿ ಚಿನ್ಮಯವಾಯಿತು. ಬಿರುಗಾಳಿಗೆ ಸೋಲಾಯಿತು. ಹೂವಿನ ಹೃದಯ ನನ್ನಾದಾಗಲಿಲ್ಲ ಎಂದು, ರೊಯ್ಯನೆ ರೋದಿಸುತ್ತ ಬೆಳಗು ಮೂಡುವುದರಲ್ಲಿ ಸಮುದ್ರಗರ್‍ಭದಲ್ಲಿ ಬಚ್ಚಿಟ್ಟು ಕೊಂಡಿತು. ಹೂ ಸಂಕಲ್ಪಕ್ಕೆ ಸ್ವರ್‍ಗ ಕೈಗೆಟುಕಿತ್ತು.
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...