Home / ಲೇಖನ / ಇತರೆ / ಚಾಲಕ ಗ್ರೇಟ್

ಚಾಲಕ ಗ್ರೇಟ್

ನಾನು ಸಾರಿಗೆ ಸಂಸ್ಥೆಯಲ್ಲಿ ೩೦ ವರ್‍ಷಗಳಷ್ಟು ಸೇವೆ ಮಾಡಿದೆ. ನನ್ನ ಅನುಭವದಲ್ಲಿ ನಮ್ಮ ಚಾಲಕ ನಿರ್‍ವಾಹಕರು ಭಲೇ ಗ್ರೇಟ್. ಹಗಲು ಇರುಳು ಅವರು ಶ್ರಮಿಸಿ ಪ್ರಯಾಣಿಕರಿಗೆ, ಸಂಸ್ಥೆಗೆ ಕೀರ್‍ತಿ ತರುವರು. ಅವರ ದುಡಿಮೆ ಸ್ವರ್‍ಗ ಸಮಾನ.

ದಿನಾಂಕ ೦೩-೦೮-೨೦೧೫ ರಂದು ಸೋಮವಾರ ದಿನದಂದು ಬೆಳಗಿನ ಜಾವ ೪ ಗಂಟೆಯಲ್ಲಿ ಜರುಗಿದ ಹೃದಯ ವಿದ್ರಾವಕ ಘಟನೆಯು ೩೫ ಜನ ಪ್ರಯಾಣಿಕರನ್ನು ಸುಹಾಸ್ ಸುಖಾಸೀನ ಬಸ್‌ನ್ನು ಸುರಕ್ಷಿತವಾಗಿ ಎಡಗಡೆಗೆ ನಿಲ್ಲಿಸುವಲ್ಲಿ ಬಸ್ ಚಾಲಕ ಅಬ್ದುಲ್ ಕೆ. ಕೊಟ್ನಾಳ್ ವಯಸ್ಸು ೩೯ ಇವರ ಸಮಯ ಪ್ರಜ್ಞೆಯನ್ನು ಎಂಥಾದರೂ ಮೆಚ್ಚಲೇಬೇಕು!

ಹೌದು! ಸಾರಿಗೆ ಸಂಸ್ಥೆಯ ಬಸ್ ಚಾಲಕ ತಾನು ಸಾವಿನ ದವಡೆಯಲ್ಲಿದ್ದರೂ ಪ್ರಯಾಣಿಕರ ಜೀವ ಉಳಿಸಿದ ಮೇಲೆ ಮೃತಪಟ್ಟ ಕರುಣಾ ಜನಕವಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮ್ಯಾದನೇರಿ ಕ್ರಾಸ್ ಕುಷ್ಟಗಿ ಕೊಪ್ಪಳ ಜಿಲ್ಲೆಯಲ್ಲಿ ಜರುಗಿದೆ.

ವಿಜಯಪುರ ಜಿಲ್ಲೆ ಇಂಡಿ ಡಿಪೋದ ವಾಹನವು ಬೆಂಗಳೂರಿನಿಂದ ಇಂಡಿಗೆ ಹೋಗುತ್ತಿತ್ತು. ಚಾಲಕ ಹೃದಯಾಘಾತಕ್ಕೆ ಒಳಗಾದ ನಂತರವೂ ಬಸ್ ಚಲಿಸುತ್ತಿತ್ತು! ವೇಗದೂತ ಬಸ್ ವೇಗವಾಗಿ ಚಲಿಸುತ್ತಿತ್ತು ಇದ್ದಕ್ಕಿದ್ದಂತೆ ಅಡ್ಡಾದಿಡ್ಡಿಯಾಗಿ ಚಲಿಸತೊಡಗಿತು. ಬಸ್ಸಿನಲ್ಲಿದ್ದವರು ಗಾಬರಿಬಿದ್ದು ಎದ್ದು ಕುಳಿತರು. ಚಾಲಕನ ಕ್ಯಾಬಿನ್ ಚಿಲಕವಾಕಿತ್ತು! ಏನೆಂದು ನೋಡುವಷ್ಟರಲ್ಲಿ ಬಸ್ ಜಮೀನಿನಲ್ಲಿ ಹೋಗಿ ನಿಂತಿತು! ಚಾಲಕನ ಉಸಿರು ನಿಂತು ಹೋಗಿತ್ತು!

ಇದನ್ನೆಲ್ಲ ಪ್ರಥಮ ವರ್‍ತಮಾನವಾಗಿ ಕುಷ್ಟಗಿ ಡಿಪೋ ಮ್ಯಾನೇಜರ್‌ ಮಂಜುನಾಥ್ ಸಾರಿಗೆ ನಿಯಂತ್ರಕ ಕಾಸೀಂಸಾಬ್‌ ಕಾಯಿಗಡ್ಡೆ ವರದಿ ಮಾಡಿರುವರಲ್ಲದೆ, ಪ್ರಯಾಣಿಕರನ್ನು ಮುಂದಿನ ಊರುಗಳಿಗೆ ಕಳಿಸುವ ವ್ಯವಸ್ಥೆ ಮಾಡಿದ್ದಲ್ಲದೆ, ಹೆದ್ದಾರಿಯ ಟೋಲ್‌ಗೇಟ್ ಅಂಬುಲೆನ್ಸ್ ಮೂಲಕ ಚಾಲಕನ ಮೃತ ದೇಹವನ್ನು ಕುಷ್ಟಗಿ ಸರ್‍ಕಾರಿ ಆಸ್ಪತ್ರೆಗೆ ಕಳಿಸಿರುವರು.

ಇದನ್ನೆಲ್ಲ ನೋಡಿದಾಗ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಗ್ರೇಟ್ ಅಲ್ಲವೇ? ನಾವು ನೀವು ಚಾಲಕರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...