Home / ಲೇಖನ / ಇತರೆ / ಚಾಲಕ ಗ್ರೇಟ್

ಚಾಲಕ ಗ್ರೇಟ್

ನಾನು ಸಾರಿಗೆ ಸಂಸ್ಥೆಯಲ್ಲಿ ೩೦ ವರ್‍ಷಗಳಷ್ಟು ಸೇವೆ ಮಾಡಿದೆ. ನನ್ನ ಅನುಭವದಲ್ಲಿ ನಮ್ಮ ಚಾಲಕ ನಿರ್‍ವಾಹಕರು ಭಲೇ ಗ್ರೇಟ್. ಹಗಲು ಇರುಳು ಅವರು ಶ್ರಮಿಸಿ ಪ್ರಯಾಣಿಕರಿಗೆ, ಸಂಸ್ಥೆಗೆ ಕೀರ್‍ತಿ ತರುವರು. ಅವರ ದುಡಿಮೆ ಸ್ವರ್‍ಗ ಸಮಾನ.

ದಿನಾಂಕ ೦೩-೦೮-೨೦೧೫ ರಂದು ಸೋಮವಾರ ದಿನದಂದು ಬೆಳಗಿನ ಜಾವ ೪ ಗಂಟೆಯಲ್ಲಿ ಜರುಗಿದ ಹೃದಯ ವಿದ್ರಾವಕ ಘಟನೆಯು ೩೫ ಜನ ಪ್ರಯಾಣಿಕರನ್ನು ಸುಹಾಸ್ ಸುಖಾಸೀನ ಬಸ್‌ನ್ನು ಸುರಕ್ಷಿತವಾಗಿ ಎಡಗಡೆಗೆ ನಿಲ್ಲಿಸುವಲ್ಲಿ ಬಸ್ ಚಾಲಕ ಅಬ್ದುಲ್ ಕೆ. ಕೊಟ್ನಾಳ್ ವಯಸ್ಸು ೩೯ ಇವರ ಸಮಯ ಪ್ರಜ್ಞೆಯನ್ನು ಎಂಥಾದರೂ ಮೆಚ್ಚಲೇಬೇಕು!

ಹೌದು! ಸಾರಿಗೆ ಸಂಸ್ಥೆಯ ಬಸ್ ಚಾಲಕ ತಾನು ಸಾವಿನ ದವಡೆಯಲ್ಲಿದ್ದರೂ ಪ್ರಯಾಣಿಕರ ಜೀವ ಉಳಿಸಿದ ಮೇಲೆ ಮೃತಪಟ್ಟ ಕರುಣಾ ಜನಕವಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮ್ಯಾದನೇರಿ ಕ್ರಾಸ್ ಕುಷ್ಟಗಿ ಕೊಪ್ಪಳ ಜಿಲ್ಲೆಯಲ್ಲಿ ಜರುಗಿದೆ.

ವಿಜಯಪುರ ಜಿಲ್ಲೆ ಇಂಡಿ ಡಿಪೋದ ವಾಹನವು ಬೆಂಗಳೂರಿನಿಂದ ಇಂಡಿಗೆ ಹೋಗುತ್ತಿತ್ತು. ಚಾಲಕ ಹೃದಯಾಘಾತಕ್ಕೆ ಒಳಗಾದ ನಂತರವೂ ಬಸ್ ಚಲಿಸುತ್ತಿತ್ತು! ವೇಗದೂತ ಬಸ್ ವೇಗವಾಗಿ ಚಲಿಸುತ್ತಿತ್ತು ಇದ್ದಕ್ಕಿದ್ದಂತೆ ಅಡ್ಡಾದಿಡ್ಡಿಯಾಗಿ ಚಲಿಸತೊಡಗಿತು. ಬಸ್ಸಿನಲ್ಲಿದ್ದವರು ಗಾಬರಿಬಿದ್ದು ಎದ್ದು ಕುಳಿತರು. ಚಾಲಕನ ಕ್ಯಾಬಿನ್ ಚಿಲಕವಾಕಿತ್ತು! ಏನೆಂದು ನೋಡುವಷ್ಟರಲ್ಲಿ ಬಸ್ ಜಮೀನಿನಲ್ಲಿ ಹೋಗಿ ನಿಂತಿತು! ಚಾಲಕನ ಉಸಿರು ನಿಂತು ಹೋಗಿತ್ತು!

ಇದನ್ನೆಲ್ಲ ಪ್ರಥಮ ವರ್‍ತಮಾನವಾಗಿ ಕುಷ್ಟಗಿ ಡಿಪೋ ಮ್ಯಾನೇಜರ್‌ ಮಂಜುನಾಥ್ ಸಾರಿಗೆ ನಿಯಂತ್ರಕ ಕಾಸೀಂಸಾಬ್‌ ಕಾಯಿಗಡ್ಡೆ ವರದಿ ಮಾಡಿರುವರಲ್ಲದೆ, ಪ್ರಯಾಣಿಕರನ್ನು ಮುಂದಿನ ಊರುಗಳಿಗೆ ಕಳಿಸುವ ವ್ಯವಸ್ಥೆ ಮಾಡಿದ್ದಲ್ಲದೆ, ಹೆದ್ದಾರಿಯ ಟೋಲ್‌ಗೇಟ್ ಅಂಬುಲೆನ್ಸ್ ಮೂಲಕ ಚಾಲಕನ ಮೃತ ದೇಹವನ್ನು ಕುಷ್ಟಗಿ ಸರ್‍ಕಾರಿ ಆಸ್ಪತ್ರೆಗೆ ಕಳಿಸಿರುವರು.

ಇದನ್ನೆಲ್ಲ ನೋಡಿದಾಗ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಗ್ರೇಟ್ ಅಲ್ಲವೇ? ನಾವು ನೀವು ಚಾಲಕರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...