Home / ಲೇಖನ / ಇತರೆ / ಚಾಲಕ ಗ್ರೇಟ್

ಚಾಲಕ ಗ್ರೇಟ್

ನಾನು ಸಾರಿಗೆ ಸಂಸ್ಥೆಯಲ್ಲಿ ೩೦ ವರ್‍ಷಗಳಷ್ಟು ಸೇವೆ ಮಾಡಿದೆ. ನನ್ನ ಅನುಭವದಲ್ಲಿ ನಮ್ಮ ಚಾಲಕ ನಿರ್‍ವಾಹಕರು ಭಲೇ ಗ್ರೇಟ್. ಹಗಲು ಇರುಳು ಅವರು ಶ್ರಮಿಸಿ ಪ್ರಯಾಣಿಕರಿಗೆ, ಸಂಸ್ಥೆಗೆ ಕೀರ್‍ತಿ ತರುವರು. ಅವರ ದುಡಿಮೆ ಸ್ವರ್‍ಗ ಸಮಾನ.

ದಿನಾಂಕ ೦೩-೦೮-೨೦೧೫ ರಂದು ಸೋಮವಾರ ದಿನದಂದು ಬೆಳಗಿನ ಜಾವ ೪ ಗಂಟೆಯಲ್ಲಿ ಜರುಗಿದ ಹೃದಯ ವಿದ್ರಾವಕ ಘಟನೆಯು ೩೫ ಜನ ಪ್ರಯಾಣಿಕರನ್ನು ಸುಹಾಸ್ ಸುಖಾಸೀನ ಬಸ್‌ನ್ನು ಸುರಕ್ಷಿತವಾಗಿ ಎಡಗಡೆಗೆ ನಿಲ್ಲಿಸುವಲ್ಲಿ ಬಸ್ ಚಾಲಕ ಅಬ್ದುಲ್ ಕೆ. ಕೊಟ್ನಾಳ್ ವಯಸ್ಸು ೩೯ ಇವರ ಸಮಯ ಪ್ರಜ್ಞೆಯನ್ನು ಎಂಥಾದರೂ ಮೆಚ್ಚಲೇಬೇಕು!

ಹೌದು! ಸಾರಿಗೆ ಸಂಸ್ಥೆಯ ಬಸ್ ಚಾಲಕ ತಾನು ಸಾವಿನ ದವಡೆಯಲ್ಲಿದ್ದರೂ ಪ್ರಯಾಣಿಕರ ಜೀವ ಉಳಿಸಿದ ಮೇಲೆ ಮೃತಪಟ್ಟ ಕರುಣಾ ಜನಕವಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮ್ಯಾದನೇರಿ ಕ್ರಾಸ್ ಕುಷ್ಟಗಿ ಕೊಪ್ಪಳ ಜಿಲ್ಲೆಯಲ್ಲಿ ಜರುಗಿದೆ.

ವಿಜಯಪುರ ಜಿಲ್ಲೆ ಇಂಡಿ ಡಿಪೋದ ವಾಹನವು ಬೆಂಗಳೂರಿನಿಂದ ಇಂಡಿಗೆ ಹೋಗುತ್ತಿತ್ತು. ಚಾಲಕ ಹೃದಯಾಘಾತಕ್ಕೆ ಒಳಗಾದ ನಂತರವೂ ಬಸ್ ಚಲಿಸುತ್ತಿತ್ತು! ವೇಗದೂತ ಬಸ್ ವೇಗವಾಗಿ ಚಲಿಸುತ್ತಿತ್ತು ಇದ್ದಕ್ಕಿದ್ದಂತೆ ಅಡ್ಡಾದಿಡ್ಡಿಯಾಗಿ ಚಲಿಸತೊಡಗಿತು. ಬಸ್ಸಿನಲ್ಲಿದ್ದವರು ಗಾಬರಿಬಿದ್ದು ಎದ್ದು ಕುಳಿತರು. ಚಾಲಕನ ಕ್ಯಾಬಿನ್ ಚಿಲಕವಾಕಿತ್ತು! ಏನೆಂದು ನೋಡುವಷ್ಟರಲ್ಲಿ ಬಸ್ ಜಮೀನಿನಲ್ಲಿ ಹೋಗಿ ನಿಂತಿತು! ಚಾಲಕನ ಉಸಿರು ನಿಂತು ಹೋಗಿತ್ತು!

ಇದನ್ನೆಲ್ಲ ಪ್ರಥಮ ವರ್‍ತಮಾನವಾಗಿ ಕುಷ್ಟಗಿ ಡಿಪೋ ಮ್ಯಾನೇಜರ್‌ ಮಂಜುನಾಥ್ ಸಾರಿಗೆ ನಿಯಂತ್ರಕ ಕಾಸೀಂಸಾಬ್‌ ಕಾಯಿಗಡ್ಡೆ ವರದಿ ಮಾಡಿರುವರಲ್ಲದೆ, ಪ್ರಯಾಣಿಕರನ್ನು ಮುಂದಿನ ಊರುಗಳಿಗೆ ಕಳಿಸುವ ವ್ಯವಸ್ಥೆ ಮಾಡಿದ್ದಲ್ಲದೆ, ಹೆದ್ದಾರಿಯ ಟೋಲ್‌ಗೇಟ್ ಅಂಬುಲೆನ್ಸ್ ಮೂಲಕ ಚಾಲಕನ ಮೃತ ದೇಹವನ್ನು ಕುಷ್ಟಗಿ ಸರ್‍ಕಾರಿ ಆಸ್ಪತ್ರೆಗೆ ಕಳಿಸಿರುವರು.

ಇದನ್ನೆಲ್ಲ ನೋಡಿದಾಗ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಗ್ರೇಟ್ ಅಲ್ಲವೇ? ನಾವು ನೀವು ಚಾಲಕರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...