Home / ಲೇಖನ / ಇತರೆ / ಇದು ಸಿನಿಮಾ ಅಲ್ಲ

ಇದು ಸಿನಿಮಾ ಅಲ್ಲ

ನೀವೆಲ್ಲ ಜುಲೈ ೨೦೧೫ರಲ್ಲಿ ನಟ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯಿಸಿರುವ ‘ಭಜರಂಗಿ ಭಾಯಿಜಾನ್’ ಚಲನಚಿತ್ರವನ್ನು ನೋಡಿ ಐದಾರು ಸಾರು ಕಣ್ಣೀರು ಸುರಿಸಿರಬಹುದು!

ಭವ್ಯ ಭಾರತದಲ್ಲಿ ಕಳೆದು ಹೋಗುವ ಪಾಕ್‌ನ ಹರ್‍ಷಾಲಿ ಮುನ್ನಿ ಮೂಕ ಬಾಲಕಿಯನ್ನು ನಾಯಕ ಪಾಸ್‌ಪೋರ್ಟ್ ಗೊಡವೆ ಇಲ್ಲದೇ ಸಾಹಸದ ಮೂಲಕವಾಗಿ ಪಾಕಿಸ್ತಾನಕ್ಕೆ ಬಿಟ್ಟು ಬರುವ ಸಾಹಸಮಯದ ಕಥೆ ವ್ಯಥೆ ತೆರೆಯ ಮೇಲೆ ನೋಡಿ ಮನಃ ಕರಗಿ ಹಲ್ಲಿ ಲೋಚಗುಟ್ಟಿದಂತೆ ಎಲ್ಲರೂ ಲೊಚಗುಟ್ಟುವವರೇ….

ಆದರೆ ಪಾಕಿಸ್ಥಾನದಲ್ಲಿ ಸಿಲುಕಿರುವ ಮೂಕ ಬಾಲಕಿಗೆ ತನ್ನ ತವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಈಕೆ ಪಾಕ್‌ನ ಸೇವಾ-ಸಂಸ್ಥೆಯೊಂದರಲ್ಲಿದ್ದಾಳೆ! ಇದು ಕರಾಚಿಯ ‘ಈದಿ ಚಾರಿಟಿ’ಯ ಮುಖ್ಯಸ್ಥ ‘ಬಿಲ್ಕೀ ಈದಿ’ ಈಕೆಗೆ ಪ್ರೀತಿಯಿಂದ ‘ಗೀತಾ’ ಎಂದು ಕರೆಯುತ್ತಿರುವರು.

ಕಳೆದ ೧೫ ವರ್ಷಗಳಿಂದ ಪಾಕಿಸ್ತಾನದಲ್ಲೇ ಇರುವ ೨೨ ಹರೆಯದ ಗೀತಾಳಿಗೆ ಮಾತು ಬಾರದ ಕಾರಣ ತನ್ನ ಹೆಸರನ್ನಾಗಲಿ ವಿಳಾಸವನ್ನಾಗಲಿ ಇತರೆ ಯಾವುದೇ ಮಾಹಿತಿ ನೀಡಿರುವುದಿಲ್ಲ!

ಆದರೆ ೨೦೧೨ರಲ್ಲಿ ಈಕೆಯನ್ನು ಭವ್ಯ ಭಾರತಕ್ಕೆ ತಲುಪಿಸುವ ಸಲುವಾಗಿ ಬಿಲ್ಕಿ ಈದಿ ಭವ್ಯಭಾರತಕ್ಕೆ ಬಂದು ಈಕೆಯ ಫೋಟೊ ಸಿಕ್ಕಿದ ಸ್ಥಳ ಇತ್ಯಾದಿ ವಿವರಗಳನ್ನು ಪೊಲೀಸ್ಸಿನವರಿಗೆ ತಲುಪಿಸಿ ಬಂದಿದ್ದರು. ಆದರೂ ಈ ಕೆಲಸ ಇನ್ನೂ ಆಗಿಲ್ಲ.

ಈಗ್ಗೆ ೧೫ ವರ್ಷಗಳ ಹಿಂದೆ ರೈಲಿನಲ್ಲಿ ಲಾಹೋರ್‌ಗೆ ಬಂದಿದ್ದ ಈಕೆಯನ್ನು ಪೊಲೀಸ್ಸಿನವರು ವಶಕ್ಕೆ ಪಡೆದಿದ್ದರು. ಮೂಕಿಯಾಗಿದ್ದರಿಂದ ಬಾಲ ಮಂದಿರಕ್ಕೆ ಸೇರಿಸಿದ್ದರು. ಅಲ್ಲಿ ಈಕೆ ಬಹಳ ಸಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದ ಈದಿ ಚಾರಿಟಿಗೆ ಸೇರಿಸಿದ್ದರು. ಅಲ್ಲಿ ಹೊಂದಿಕೊಳ್ಳದ ಕಾರಣ ಬಿಲ್ಕೀ ಈದಿಯವರು ತಮ್ಮ ಮನೆಯಲ್ಲಿ ಈ ಹುಡುಗಿನ ಸಾಕುತ್ತಿರುವರು!

“ಈಕೆ ಹಿಂದಿಲಿ ಏನೇನೋ ಬರೆದು ತೋರಿಸುವಳು ಇಲ್ಲಿನವರಿಗೆ ಅರ್‍ಥವಾಗುತ್ತಿಲ್ಲ. ಕೈಸನ್ನೆ ಬಾಯಿ ಸನ್ನೆಯಲ್ಲಿ ಭಾರತಕ್ಕೆ ಹೋಗಬೇಕೆಂದು ಕಣ್ಣೀರಿಡುತ್ತಾಳೆ! ಇವಳ ವೇಷಭೂಷಣ ಸಂಪ್ರದಾಯವನ್ನು ಗಮನಿಸಿದರೆ ಪಂಜಾಬಿನ ಹಳ್ಳಿ ಹುಡುಗಿಯಿರಬೇಕೆಂದು ಅನಿಸುವುದು ಹಿಂದೂ ದೇವರುಗಳ ಜತೆಯಲ್ಲಿ ಅಲ್ಲಾನನ್ನೂ ಪ್ರಾರ್‍ಥಿಸುವಳು. ಭಾರತಕ್ಕೆ ಮರಳಬೇಕೆಂಬ ಬಲವಾದ ಕೋರಿಕೆ ಎಂದಿಗೆ ಈಡೇರುವುದೋ…” ಎಂದು ಬಿಲ್ಕೀ ಈದಿಯವರು ತಮ್ಮ ಅಳಲನ್ನು ಇತ್ತೀಚೆಗೆ ಸುದ್ದಿ ಮಾಧ್ಯಮದವರ ಮುಂದೆ ತೋಡಿಕೊಂಡಿದ್ದಾರೆ!

ಹಳ್ಳಿ-ತಾಲ್ಲೂಕು-ಜಿಲ್ಲೆ-ರಾಜ್ಯ-ದೇಶ-ವಿದೇಶದ ಗಡಿಭದ್ರತೆಯ ಮುಂದೆ ಸಂಪರ್‍ಕ ಜಾಲತಾಣ ಕೆಲಸ ಮಾಡುವುದು ಎಷ್ಟೊಂದು ಕಷ್ಟವೆಂದು ನಿಜ ಜೀವನದ ಸಿನಿಮಾದಿಂದ ವ್ಯಕ್ತವಾಗುವುದು.

ಬಹುಶಃ ಪುಟ್ಟ ಬಾಲೆಯನ್ನು ಕಳೆದುಕೊಂಡವರು ಇನ್ನು ನಮ್ಮ ಮಗಳು ಸಿಗಲಾರಳು! ಎಂದು ಕೈಚೆಲ್ಲಿ ಮರೆತಿರಬಹುದೆಂದು ಮೇಲುನೋಟಕ್ಕೆ ಕಂಡುಬರುವುದು. ಈ ಘಟನೆ ಸುಖಾಂತ ಕಾಣಬಹುದೆಂದು ಎದುರು ನೋಡುವ…
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...