ಬಡವರ ನವಣೆ

ಬಡವರ ನವಣೆ

೧೯೬೩-೧೯೬೪ರಲ್ಲಿ ನಮ್ಮಪ್ಪನ ಹಿಂದಿಂದೆ… ಎರೆಹೊಲ, ಕೆನ್ನೊಲ, ಕಣಗಳಿಗೆ ಸುತ್ತುತ್ತಿದ್ದೆ.

ನೂರಾರು ಎಕರೆ ಬರೀ ನವಣೆಯನ್ನೇ ಬೆಳೆಯುತ್ತಿದ್ದರು. ನೂರಾರು ರೈತರು ಕೂಡಾ ಕಡ್ಡಾಯವಾಗಿ ನೂರಾರು ಚೀಲದಿಂದ ಹಿಡಿದು ಕನಿಷ್ಠ ಹತ್ತು ಚೀಲಗಳಾದರೂ ನವಣೆ ಬೆಳೆದು ಖುಷಿಪಡುತ್ತಿದ್ದರು.

ಕೆಲವರಂತೂ ಪ್ರತಿ ವರ್‍ಷ ನವಣೆ ಬೆಳೆದು ಅವುಗಳನ್ನು ಬಂಡಿಗಳ ಮೇಲೆ ಮೆರವಣಿಗೆ ಮಾಡುತ್ತಾ ತಾಳಮೇಳ ಭಾಜಭಜಂತ್ರಿಯಲ್ಲಿ ಮನೆದುಂಬಿಸಿಕೊಳ್ಳುತ್ತಿದ್ದರಲ್ಲದೆ ಆವತ್ತು ಇಡೀ ಊರು ಕೇರಿಗೆಲ್ಲ ನವಣೆಬಾನ- ಹುರುಳಿಕಟ್ಟು, ಮಜ್ಜಿಗೆ ನವಣೆ ಅನ್ನ… ನೀಡಿ ಸಂಭ್ರಮಿಸುತ್ತಿದ್ದರು!

ನವಣೆ ಬೆಳೆ-ತೆನೆ-ನವಣೆ-ನವಣೆ ಅಕ್ಕಿ ಎಲ್ಲ… ಬಂಗಾರದ ಬಣ್ಣ… ಅದರ ಹೊಳಪು, ಘಮಾ ಘಮಾ.. ಹಬ್ಬ ಹರಿದಿನಗಳಲ್ಲಿ ನವಣೆ ಅನ್ನ ಇದ್ದರೆ ಹಬ್ಬ ಮುಗಿದಂತೇ…

ಒಮ್ಮೆ ನವಣೆ ಹೊಲದಲ್ಲಿ ನಿಂತು ಹರ್‍ಷದ ಹೊನಲು ಹರಿಸಿ ನಾನು ನನ್ನಪ್ಪನ ಕೇಳಿಯೇ ಬಿಟ್ಟೆ ‘ಅಪ್ಪ ನೂರಾರು ಜನರು ನೂರಾರು ಎಕರೆಯಲ್ಲಿ ಬರೀ ಎರೆಹೊಲದಲ್ಲಿ ನೀರು ಗೊಬ್ಬರವಿಲ್ಲದೆ ನವಣೆ ಬೆಳೆಯುವ ಗುಟ್ಟಾದರೂ ಏನು?’ ಅಂತಾ ಅಂದೆ.

‘ನವಣೆ ಗಟ್ಟಿ, ಆಯುಷ್ಯ ವೃದ್ಧಿ, ಮಳೆಯಿಲ್ಲದೆ ಗೊಬ್ಬರವಿಲ್ಲದೆ ಮೂರು ತಿಂಗಳಲ್ಲಿ ಸಮೃದ್ಧಿ ಬೆಳೆ. ನಮ್ಮಪ್ಪ ಬಬ್ಲೆಪ್ಪ, ತಾತ ದೊಡ್ಡೆಲ್ಲಪ್ಪ, ಮುತ್ತಾತ ನಡುವಲ ಯಲ್ಲಪ್ಪ ಇವರೆಲ್ಲ ನವಣೆ ಬೆಳೆದು ನಳನಳಸಿ ಬೆಳೆದಿದ್ದರು ಗಟ್ಟಿ ಮುಟ್ಟಾಗಿದ್ದರು.’ ಎಂದ ಅಪ್ಪ.

‘ಅಪ್ಪ ಇದರಲ್ಲಿ ಏನಿದೆ? ಅಂಥಾದೇನಿದೆ?’ ಎಂದೆ.

ಅಪ್ಪ ಮಾತುಗಾರ.

‘ಇದರಲ್ಲಿ ಏನಿಲ್ಲ ಎಂದು ನನ್ನ ಕೇಳು… ಮೂಳೆ ಬೆಳೆಯಲು ಗಟ್ಟಿಗೊಳ್ಳಲು ಇದರಲ್ಲಿ ಕ್ಯಾಲ್ಸಿಯಂ ಔಷಧಿ ಇದೆ. ಮಲಬದ್ಧತೆಗೆ ಮೂಲ ವ್ಯಾಧಿಗೆ ನಾರಿನಾಂಶವಿದೆ. ಶಕ್ತಿವರ್‍ಧಕವಾಗಿ ಪ್ರೋಟಿನ್ ಅಂಶವಿದೆ. ಜೀರ್‍ಣಶಕ್ತಿಗೆ ಕಾರ್‍ಬೋಹೈಡ್ರೇಟ್ ಅಂಶವಿದೆ. ಕೊಬ್ಬಿನಾಂಶ ಕಡಿಮೆ ಇದೆ. ಸಕ್ಕರೆ ಕಾಯಿಲೆಗೆ ರಾಮಬಾಣ. ಇದು ಮಕ್ಕಳಿಗೆ ವೃದ್ಧರಿಗೆ ಬಾಣಂತಿಯರಿಗೆ ಕಾಯಿಲೆವುಳ್ಳವರಿಗೆ ಸರ್‍ವೋತೋಮುಖ ಆಹಾರ. ಕ್ಯಾನ್ಸರ್ ನೀಗಿಸುವ ಗುಣ ಹೊಂದಿದೆ. ನವಣೆಯಿಂದ ಅನ್ನ-ಗಂಜಿ-ಮುದ್ದೆ-ರೊಟ್ಟಿ, ದೋಸೆ-ಹಪ್ಪಳ, ಸಂಡಿಗೆ, ಸಿಹಿತಿಂಡಿಗಳು ಖಾರದ ತಿಂಡಿ ತಿನಿಸುಗಳನ್ನು ಮಾಡಿ, ತಿನ್ನಬಹುದು. ಮೂರು ಹೊತ್ತು ತಿಂದರೆ ಅಡ್ಡ ಪರಿಣಾಮವಿಲ್ಲ! ಬದಲಿಗೆ ರೋಗ ನಿರೋಧಕ ಶಕ್ತಿ ವೃದ್ಧಿಗೊಳ್ಳುವುದೆಂದು ಅಪ್ಪ ವಿವರಿಸಿ ಹೇಳಿದ.

ಇದು ಬರೀ ಬಡವರ ನವಣೆಯಲ್ಲ. ಸರ್‍ವಜನರ ಸರ್‍ವೋತೋಮುಖ ಆಹಾರ.

ಇದನ್ನು ಮಕ್ಕಳೆಲ್ಲ ತಿಂದು, ಆರೋಗ್ಯವಂತರಾಗುವಿರಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಲುಮಾರಿಕೆ
Next post ಮಂಡೇಲನ ಬಂಧುಗಳು

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಉಧೋ ಉಧೋ

    ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…