Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...