Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...