Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...