Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...