Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್