Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...