Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...