Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...