Home / ಕವನ / ಕವಿತೆ / ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ ಯಾರಿರಬಹುದು?
ಅದೂ ಇಂಥ ಹೊತ್ತು ಬಡ ಬಡ ಸದ್ದು
ಯಾರಿರಬಹುದು?
ಬಾಗಿಲ ತೆರೆಯೋ ಧೈರ್‍ಯವಿಲ್ಲ
ಯಾರಿರಬಹುದು-ಪೊಲೀಸರಿದ್ದಾರು
ಪಾರ್‍ಟಿಯವರಿದ್ದಾರು
ಎಡಪಕ್ಷ ಬಲಪಕ್ಷ ಜಾಸೂಸಿನವರು
ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ
ಬಂದವನೊಬ್ಬನ ನಾಲಿಗೆ ತುಂಡು
ಇನ್ನೊಬ್ಬನ ಕೈತುಂಡು ಮತ್ತೊಬ್ಬನ ಕಾಲ್ತುಂಡು
ಹಲವರಿಗೆ ಕಣ್ಣುಗಳೆ ಇಲ್ಲ
ಅಂಗಾಂಗ ಕತ್ತರಿಸಿ ಬಿಸಾಕುತಾರಂತೆ
ಇಲ್ಲ ತೆರೆಯೋಲ್ಲ ನಾ ಬಾಗ್ಲ ತೆರೆಯೋಲ್ಲ
ದೀಪ ಹಚ್ಚಲ್ಲ ಮಾತಾಡ್ದೆ ಇರ್‍ತೀನಿ
ಸತ್ತಂತೆ ಇರ್‍ತೀನಿ ಮೌನವಾಗಿ
ಹಗಲಾದ್ರೂ ಹೀಗೇನೆ ಇರುಳಾದ್ರೂ ಹೀಗೇನೆ
ಇಲಿಯಂತೆ ಇರಬೇಕು ಯಾರಿಗೂ ಕಾಣಿಸದೆ
ಹೊದ್ದು ಮಲಕೊಳ್ತೀನಿ ಸದ್ದು ಮಾಡದೆ ನಾನು
ಆದ್ರೂ ಬಿಡವಲ್ಲರು ಬಾಗಿಲ ಬಡಿತ
ಬಡೀತಾನೇ ಇದ್ದಾರೆ ಬಡ ಬಡ ಧಡ ಬಡ
ಕೈಲಿ ಬಡೀತಾರೆ ದೊಣ್ಣೆಯಲಿ ಬಡೀತಾರೆ
ಮೊನ್ನೆಯೂ ಹೀಗಿತ್ತು ನಿನ್ನೆಯೂ ಹೀಗಿತ್ತು
ಎಷ್ಟೊತ್ತಿಗೋ ಬಂದು ಬಡೀತಾನೆ ಇರ್‍ತಾರೆ
ನಾಳೇನೂ ಬಡೀತಾರೆ ನಾಡಿದ್ದು ಬಡೀತಾರೆ
ಒಂದಲ್ಲ ಒಂದಿನ ಕೊಂಡೋಗದು ಖಂಡಿತ
ನಾಳೆ ಬರೋದು ಇಂದೇ ಬರ್‍ಲಿ
ತೆರೆದೇ ಬಿಡ್ತೀನಿ ಆಗೋದು ಆಗ್ಲಿ
ನರಕಕ್ಕಿಂತ್ಲು ಅದರ ಭಯವೇ ನರಕಾಂತಾರೆ
ನಾ ಕಾಣದ ನರಕ ಇನ್ನೇನಿದೆ?
ಏನ್ ಬೇಕೋ ಅದು ಮಾಡ್ಳಿ ಏನಾದ್ರೂ ಕಿತ್ಕಳ್ಲಿ
ಕಾಯ ನನ್ದಲ್ಲ ಮನಸು ನನ್ದಲ್ಲ
ಇಂಥ ಭಯಗ್ರಸ್ತ ಊರ್‍ನಲ್ಲಿ
ನಿಲ್ಸಯ್ಯ ನಿನ್ನ ಬಾಗಿಲ ಬಡಿತ
ನಾನಿದೊ ಬಂದೆ ಬಾಗಿಲ ತೆರೆದೆ
ಖಂಡವಿದ ಕೋ ಮಾಂಸವಿದ ಕೊ
ಚಂಡ ವ್ಯಾಘ್ರನೆ ನೀನಿದೆಲ್ಲವನುಂಡು ಸುಖದಿಂದಿರು
ನಾಳೆ ಇನ್ನೊಂದ್ಮನೆ ಹೋಗಿ ನೋಡ್ಕೊ
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...