Home / ಕವನ / ಕವಿತೆ / ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ
ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ
ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ
ಉಂಡುಂಡು ಮಲಗಯ್ಯ ನಂಜುಂಡ ಅಯ್ಯ
ನೀ ದುಂಡಾಗೆ ಮಲಗೊ

ತಿಂದು ಮಲಗೋ ನಂಜುಂಡ ಅಯ್ಯ
ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ
ಎಳ್ಳುಂಡೆ ಗುಳ್ಳುಂಡೆ ಹಂಡೇಲಿ ತಂದೇವೊ
ತಿಂದು ಮಲಗಯ್ಯ ನಂಜುಂಡ ಅಯ್ಯ
ನೀ ಚಂದಾಗೆ ಮಲಗೊ

ಹೊದ್ದು ಮಲಗೋ ನಂಜುಂಡ ಅಯ್ಯ
ಚಡ್ಡರ ತಂದೇವೊ ಕೌದಿ ತಂದೇವೊ
ಕೊಲ್ಲಾಪುರದಿಂದ ಕಂಬಳಿ ತಂದೇವೊ
ಯಲ್ಲಾಪುರದಿಂದ ಮಖಮಲ್ಲು ತಂದೇವೊ
ಹೊದ್ದು ಮಲಗಯ್ಯ ನಂಜುಂಡ ಅಯ್ಯ
ನೀ ಮುದ್ದಾಗೆ ಮಲಗೊ

ಆಲಿಸಿ ಮಲಗೋ ನಂಜುಂಡ ಅಯ್ಯ
ವಾಲಗ ತಂದೇವೊ ವಾದ್ಯ ತಂದೇವೊ
ಹಲಗೆ ಜಾಗಟೆ ಶಂಖ ತಂದೇವೊ
ಆಲಿಸಿ ಮಲಗಯ್ಯ ನಂಜುಂಡ ಅಯ್ಯ
ನೀ ಲಾಲಿಸಿ ಮಲಗೊ

ಮುಂಗೋಳಿ ಕೂಗೀತು
ಪಲ್ಲಕಿ ಬಂದೀತು
ಜಳಕಕ್ಕೆ ಸ್ವಾಮಿ ನಿನ್ನ ಒಯ್ದೇವೊ
ಜಳಕ ಮಾಡಿಸಿ ತಂದೇವೊ ಸ್ವಾಮೀ ನಿನ್ನ
ಮಲ್ಲಿಗೆ ಹರಡಿ ಹಾದಿಯಲಿ

ಮಲಗೊ ಚೆನ್ನಿಗರಾಯ
ಮಲಗೋ ಕನಸಿಗರಾಯ
ಮೆಲ್ಲನೆ ನಿದ್ದೆಗೆ ತೆರಳೊ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...