Home / ಕವನ / ಕವಿತೆ / ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ
ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ
ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ
ಉಂಡುಂಡು ಮಲಗಯ್ಯ ನಂಜುಂಡ ಅಯ್ಯ
ನೀ ದುಂಡಾಗೆ ಮಲಗೊ

ತಿಂದು ಮಲಗೋ ನಂಜುಂಡ ಅಯ್ಯ
ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ
ಎಳ್ಳುಂಡೆ ಗುಳ್ಳುಂಡೆ ಹಂಡೇಲಿ ತಂದೇವೊ
ತಿಂದು ಮಲಗಯ್ಯ ನಂಜುಂಡ ಅಯ್ಯ
ನೀ ಚಂದಾಗೆ ಮಲಗೊ

ಹೊದ್ದು ಮಲಗೋ ನಂಜುಂಡ ಅಯ್ಯ
ಚಡ್ಡರ ತಂದೇವೊ ಕೌದಿ ತಂದೇವೊ
ಕೊಲ್ಲಾಪುರದಿಂದ ಕಂಬಳಿ ತಂದೇವೊ
ಯಲ್ಲಾಪುರದಿಂದ ಮಖಮಲ್ಲು ತಂದೇವೊ
ಹೊದ್ದು ಮಲಗಯ್ಯ ನಂಜುಂಡ ಅಯ್ಯ
ನೀ ಮುದ್ದಾಗೆ ಮಲಗೊ

ಆಲಿಸಿ ಮಲಗೋ ನಂಜುಂಡ ಅಯ್ಯ
ವಾಲಗ ತಂದೇವೊ ವಾದ್ಯ ತಂದೇವೊ
ಹಲಗೆ ಜಾಗಟೆ ಶಂಖ ತಂದೇವೊ
ಆಲಿಸಿ ಮಲಗಯ್ಯ ನಂಜುಂಡ ಅಯ್ಯ
ನೀ ಲಾಲಿಸಿ ಮಲಗೊ

ಮುಂಗೋಳಿ ಕೂಗೀತು
ಪಲ್ಲಕಿ ಬಂದೀತು
ಜಳಕಕ್ಕೆ ಸ್ವಾಮಿ ನಿನ್ನ ಒಯ್ದೇವೊ
ಜಳಕ ಮಾಡಿಸಿ ತಂದೇವೊ ಸ್ವಾಮೀ ನಿನ್ನ
ಮಲ್ಲಿಗೆ ಹರಡಿ ಹಾದಿಯಲಿ

ಮಲಗೊ ಚೆನ್ನಿಗರಾಯ
ಮಲಗೋ ಕನಸಿಗರಾಯ
ಮೆಲ್ಲನೆ ನಿದ್ದೆಗೆ ತೆರಳೊ
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...