ವಿಶ್ವ ಜಂಗಮ ದೀಪ ಬೆಳಗಬೇಕು

ಜಾತಿ ಜಂಗಮ ಸಾಕು ಜ್ಯೋತಿ ಜಂಗಮ ಬೇಕು
ಲಿಂಗ ತತ್ತ್ವದ ಬೆಳಕು ಕಾಣಬೇಕು
ಕೋತಿ ಭಾವನೆ ಸಾಕು ನೀತಿ ಜೀವನ ಬೇಕು
ವಿಶ್ವ ಜಂಗಮ ದೀಪ ಬೆಳಗಬೇಕು

ಶಬ್ದದಾಚೆಗೆ ಸಾಗು ಅರ್‍ಥದಾಚೆಗೆ ಹೋಗು
ಶಬ್ದಾರ್‍ಥ ಗಡಿಯಾಚೆ ಅರುಹು ಚಾಚು
ದೇಹ ಢಂಗುರ ದಾಟು ಆತ್ಮ ಡಿಂಢಿಮ ದಾಟು
ಶಿವನ ಡಮರುಗ ನಾದ ಕೇಳು ಕೇಳು

ಪಿಚ್ಚುಗಣ್ಣಿನ ಹುಚ್ಚು ಹುಳಿನುಚ್ಚು ಯಾಕಪ್ಪ
ಗಪ್ಪಂತ ಅಪ್ಪನ ಕಾಣೊ ಬೆಪ್ಪ
ಶಿಖರದಾಚೆಯ ಶಿಖರ ಶ್ರೀಶೈಲ ಗುರುಶೈಲ
ಗುರುಶಿಖರ ಗುರುತಂದಿ ಬಂದನಪ್ಪ

ಹುಟ್ಟು ದೇವರ ಗುಟ್ಟು ಸಾವು ಕಾಲನ ಕಟ್ಟು
ಮುಟ್ಟಾಟ ದಾಟುತ್ತ ಮ್ಯಾಲ ಹಾರು
ಬಿದ್ದೋರ ಹಿಡಿದೆತ್ತು ಆತ್ತೋರ ಮೇಲೆತ್ತು
ಜಗಕ ಜಂಗಮ ಜ್ಯೋತಿ ದೀಪತೋರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವಾಪುರಕ್ಕೊಂದು ಪ್ರವಾಸ
Next post ತೋಳ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…