Home / ಕವನ / ಅನುವಾದ / ಪುನರಾವತಾರ

ಪುನರಾವತಾರ

ಹಿಗ್ಗುತ್ತಿರುವ ವೃತ್ತದಾಕಾರದಲ್ಲಿ, ಸುತ್ತುತ್ತ ಸುತ್ತುತ್ತ,
ಕೇಳಿಸದು ಡೇಗೆಗೆ ಡೇಗೆಗಾರನ ಕೂಗು;
ಕಳಚಿಕೊಳ್ಳುತ್ತಲಿದೆ ಅಂಗಾಂಗ, ಒಟ್ಟಾಗಿ ಹಿಡಿಯಲಾರದ ಕೇಂದ್ರ,
ಛೂಬಿಟ್ಟ ಹಾಗಿದೆ ಅನಾಯಕತೆಯನ್ನೇ ಇಡಿಯ ಲೋಕದ ತುಂಬ;
ರಕ್ತಮಂದ ಪ್ರವಾಹ ಕಟ್ಟೊಡೆದು ನುಗ್ಗಿದೆ
ಮುಗ್ಧತೆಯ ಉತ್ಸವ ಮುಳುಗಿ ತಳ ಸೇರಿದೆ,
ಉತ್ತಮರಿಗಿಲ್ಲ ದೃಢನಂಬಿಕೆ, ನಿಕೃಷ್ಟರಿಗೆ
ತೀವ್ರ ಭಾವೋನ್ಮಾದಪರತೆ.

ಯಾವುದೋ ದರ್‍ಶನಕ್ಕಿದು ಕಾಲ ಖಂಡಿತ,
ಪುನರಾವತಾರಕ್ಕೆ ಕಾಲ ಇದು ಖಂಡಿತ.
ಪುನರಾವತಾರ! ಪದದುಚ್ಚಾರ ಆಯಿತೋ
ಕಣ್ಣಕುಕ್ಕುತ್ತಿದೆ ಪುರಾಣಸ್ಮೃತಿಯಿಂದೆದ್ದ ಘೋರ ಬೃಹದಾಕಾರ,
ದೂರ ಮರುಭೂಮಿಯಲ್ಲೆಲ್ಲೊ ನರಶಿರವನ್ನು ಹೊತ್ತ ಸಿಂಹಶರೀರ;
ಶೂನ್ಯಕಾರುವ ನೋಟ, ಸೂರ್‍ಯನಂತೇ, ಕ್ರೂರ,
ಭಾರ ತೊಡೆಯೆತ್ತೆತ್ತಿ ನಿಧಾನ ಚಲಿಸುತ್ತಿದೆ,
ಕೆರಳಿರುವ ಮರುಭೂಮಿಹಕ್ಕಿಗಳ ನೆರಳುಗಳು ಅದರ ಸುತ್ತ.
ಕತ್ತಲಿಳಿಯುತ್ತಿದೆ ಮತ್ತೆ ಕೆಳಗೆ. ಈಗ
ಗೊತ್ತಾಗುತ್ತಿದೆ ನನಗೆ ತೂಗುತೊಟ್ಟಿಲದೊಂದು
ಇಪ್ಪತ್ತು ಶತಕಗಳ ಗಾಢನಿದ್ದೆಯ ಕಾಡಿ ದುಃಸಪ್ನ ಬಡಿಸಿದ್ದು.
ತನ್ನ ಜನನದ ಗಳಿಗೆ ಇನ್ನೇನು ಬಂತೆಂದು
ತೂಗಿ ಚಲಿಸುತ್ತಿದೆಯೊ ಹೇಗೆ ಈ ಘೋರಮೃಗ
ಬೆತ್ಲಹಮ್ಮಿನ ಕಡೆಗೆ?
*****
ಎರಡು ಸಾವಿರ ವರ್‍ಷಗಳಿಗೊಮ್ಮೆ ಯುಗ ಬದಲುತ್ತದೆ; ಹೊಸ ಅವತಾರದಿಂದ ಅದರ ಆರಂಭವಾಗುತ್ತದೆ ಎಂದು ಏಟ್ಸ್ ನಂಬಿದ್ದ. ಕ್ರಿಸ್ತ ಜನಿಸಿ ಎರಡು ಸಹಸ್ರ ವರ್‍ಷಗಳಾಗುತ್ತಿವೆ. ಯುಗಜೀವನ ತುಂಬ ಕಲುಷಿತವಾಗಿದೆ. ಆಗಲಿರುವ ಅವತಾರದ ಕಲ್ಪನೆ ಕವನದಲ್ಲಿ ಮೂಡಿದೆ.

ಪುರಾಣ ಸ್ಮೃತಿ: ಮನುಷ್ಯ ಜನಾಂಗಕ್ಕೆಲ್ಲ ಸಾಮಾನ್ಯವಾದ ಸ್ಮೃತಿ, ಪುರಾಣ ಐತಿಹ್ಯಗಳಲ್ಲಿ ಮತ್ತೆಮತ್ತೆ ಪುನರಾವರ್‍ತಿಸುವ ಪ್ರತಿಮೆಗಳ ಸಂಗ್ರಹ. ಇಲ್ಲಿ ಬರುವ ‘ನರಶಿರವನ್ನು ಹೊತ್ತ ಸಿಂಹಶರೀರ’ ಅಂಥ ಒಂದು ಪ್ರತಿಮೆ.

ಬೆತ್ಲೆಹೆಮ್ : ಕ್ರಿಸ್ತನ ಜನ್ಮಸ್ಥಳ.

ಮೂಲ: ವಿಲಿಯಂ ಬಟ್ಲರ್ ಏಟ್ಸ್

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...