Home / ಕವನ / ಕವಿತೆ / ಎದೆಯೆಂಬ

ಎದೆಯೆಂಬ

ಎದೆಯೆಂಬ ಹೊಲವನ್ನ ಹದವಾಗಿ ಹರಗೀನಿ
ಬೆದೆ ಮಳೆ ಬಂದಂಗೆ ಮಿದು ಮಾಡು ಬಾರೆ
ಮಿದುವಾದ ಹೊಲದಾಗ ಬೀಜಾನ ಬಿತ್ತೀನಿ
ಬೇರಿಗೆ ಕಸುವಾಗೊ ಸತುವನ್ನು ತಾರೆ  ||೧||

ಎದೆಯೆಂಬ ಮರುಭೂಮಿ ಬರಬಾರಾ ಒಣಗಿದೆ
ಹನಿಹನಿ ಸುರಿಸುತ್ತ ಹಸರಿಸು ಬಾರೆ
ಬಾಯೊಣಗಿ ಬೋರ್ಯಾಡಿ ಪ್ರಾಣಾ ಓಡಾಡ್ಯಾವೆ
ಜೀವಾನ ಉಳಿಸಾಕೆ ಮೇಲಿಂದ ಬಾರೆ  ||೨||

ಎದೆಯೆಂಬ ಪೀಠಾನ ಝಾಡಿಸಿ ಜಪ್ಪಿಸಿ
ಕಾದೀನಿ ನಿನಗಾಗಿ ಕುಂತುಗೊ ಬಾರೆ
ಸಭೆ ತುಂಬಿ ಕಾದೈತೆ ಕಣ್ಕಣ್ಣು ಬಿಡತೈತೆ
ಹಡದೀಯ ಹಾಸ್ಯೈತೆ ನಡಕೊಂತ ಬಾರೆ  ||೩||

ಎದೆಯೆಂಬ ನೆಲದಾಗೆ ಗಿಡಮರ ನರನರಾ
ಒಣಗ್ಯಾವೆ ಹಿಡಿದಾವೆ ಒಳಗೆಲ್ಲೋ ಜೀವಾ
ಈ ನೆಲಾ ಬಾಯ್ಬಿಟ್ಟು ಬಿರುಕೀನ ಮಕವಿಟ್ಟು
ನೀರೆ ಬಾರೇ ಬಾರೆ ಕೂಗ್ಯೈತೆ ಜೀವಾ  ||೪||

ಎದೆಯೆಂಬ ಗುಡಿಯಾಕೆ ಬಣಬಣ ಬರಿಗಂಟೆ
ಉರದೈತೆ ಇರುಳೆಲ್ಲಾ ದೀಪಾಧೂಪಾ
ಗರ್ಭಾಗುಡಿಯಾಗೆ ನೀ ಮನಿದೇವ್ತೆ ಇರದಾಗ
ಯಾರೀಗೆ ಈ ಗುಡಿ ಈಪೂಜಿ ಪಾಪಾ ||೫||

ಎದೆಯೆಂಬ ಪಂಜರದೊಳಗೊಂದು ಗಿಣಿರಾಮಾ
ಸಂಗಾತಿ ಬೇಕಂತಾ ಕರದೈತೆ ಬಾರೆ
ಹಣ್ಣನ್ನ ತಿನವಲ್ದು ಕಣ್ಣನ್ನ ಮುಚುವಲ್ದು
ಸೆಳ್ಳನ್ನೆ ಕುಕತೈತೆ ಅರಗಿಣಿ ಬಾರೆ  ||೬||

ಎದೆಯೆಂಬ ಬಾವ್ಯಾಗೆ ಬರಿತಳ ಕಂಡೈತೆ
ಬರಿಕೊಡ ಜೋತಾಡಿ ನೇತಾಡುತಾವೆ
ಬಾವೇನು ಜೀವಿಲ್ದ ಹೆಣಬಾಯಿಯಾಗ್ಯೈತೆ
ಅಂತಾರಾಗಂಗೀಬಾ ತುಳುಕಲಿ ಒಲವೇ ||೭||

ಎದೆಯೆಂಬ ಗಿಡದಾಗೆ ಎಲಿಯಿಲ್ಲ ಚಿಗುರಿಲ್ಲ
ಬರಲಾಗಿ ನಿಂತೈತೆ ರಸವಿಲ್ದ ಜೀವಾ
ಹಸಿರಿನ ಸೀರ್ಯುಟ್ಟು ಹೂಮುಡಿದು ಕಾಯಾಗಿ
ಹಣ್ಣಾಗಿ ಗಿಡತುಂಬು ಬಾರೆನ್ನ ಸತುವಾ  ||೮||

ಎದೆಯೆಂಬ ಹೊನ್ನಾಡು ರತ್ನ ಮುತ್ತಿನ ನಾಡು
ಹಾಳಾಗಿ ಹಂಪ್ಯಾಗಿ ಕೂಗ್ಯಾವೆ ಗೂಗಿ
ನಿನ್ನ ಗೆಜ್ಜಿ ಪಾದ ಸೋಕಿದರೆ ಈ ಕೊಂಪಿ
ನಂದಾನವಾದೀತು ಕೋಗಿಲೆ ಕೂಗಿ  ||೯||

ಎದೆಯೆಂಬ ಈ ಮನಿ ಕಸಕಾಗಿ ತೌರ್ಮನಿ
ಧೂಳು ದುಮ್ಮು ಮೂಲಿಮೂಲಿಗೆಲ್ಲ
ವಾರಣ ಸಾರಣಿ ಮಾಡಿ ಈ ಮನಿಯಾಗೆ
ಹಣತೆಯ ಹಚ್ಚು ಬಾ ಕಳೆಯಲಿ ಕತ್ಲಾ  ||೧೦||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...