Home / ಕಥೆ / ಕಾದಂಬರಿ / ಮಲ್ಲಿ – ೩

ಮಲ್ಲಿ – ೩

ಡೆಪ್ಯುಟೀಕಮೀಷನರ್ ಸ್ವಂತವಾಗಿ ಸೈನ್ಮಾಡಿರುವ ಪತ್ರ ಬಂದಿದೆ ಪಟೇಲರಿಗೆ. ಊರಿಗೆ ಊರೇ ಬೆರೆತುಕೊಂಡುಹೋಗಿದೆ. “ರಾಣಿ ಮೊಮ್ಮಗ ಬರುತಾರಂತೆ : ಈಗ ನಮ್ಮ ಬುದ್ದಿಯವರು ಹೋಗಬೇಕಂತೆ” ಎಂದು ಊರಿನವರಿಗೆಲ್ಲಾ ಸಂತೋಷ. “ಏನೇ ಅನ್ನು, ದೊಡ್ಮಬುದ್ಧಿಯವರಂಗಲ್ಲ ಇವರು. ಅವರು ಊರುಬಿಟ್ಟು ಇನ್ನೆಲ್ಲೂ ಹೋಗುತ್ತಲೇ ಇರಲಿಲ್ಲ. ಇರೋವರೆಗೂ ಎಲೇಮರೇ ಕಾಯಂಗೆ ಇದ್ದು ಶಿನನ ಪಾದ ಸೇರಿದರು. ಇವರು ಹಂಗಲ್ಲ. ನೋಡು ಸುಬೇದಾರ್ರು, ಸಬ್ಡಿನಿರ್ಜರು, ದುಪಟೀಕಮೀಷನ್ರವರೆಗೂ ಹತ್ತಿ ಬುಟ್ಟವರೆ. ಈಗ ರಾಣಿ ಮೊಮ್ಮಗನ್ನೇ ನೋಡತಾರೆ ಅಂದಮೇಲೆ ಮಹಾರಾಜರವರೆಗೂ ಹೋಗಲೇಬೇಕೋ? ಹುಟ್ಟಿದರೂ ಇಂತಾ ಮಗ ಹುಟ್ಟಬೇಕು ಮನೇಲಿ. ನೋಡು ಆನೇಕಾಡನೋರ ಮನೆತನ ಎಂಥಾದ್ದು ಅಂತ ಭೂಲೋಕಕ್ಕೆಲ್ಲ ಹಬ್ಬಿ ಬಿಡುತದೋ! ಭಲೇ ಭಲೇ” ಎಂದು ಒಬ್ಬ ಮುದುಕ ಅಂದ.

“ಈ ನಮ್ಮ ಬುದ್ಧಿ ಯೋರಿಗೆ ಇಂಗ್ಲೀಷು ಅಷ್ಟು ಬಂದಿರೋದಲ್ಲಾ ಬೇಕಾದರೆ ರೆವಿನ್ಯೂ ಕಮಿರ್ಷರು, ಕೌನ್ಸಿಲ್ಲರು, ಕೊನೆಗೆ ದಿವಾನ್ಗಿರಿ ಕೂಡ ಮಾಡೇ ಮಾಡೋ ಬುದ್ದಿ. ಏನು ಮಾಡೋದು ; ಕಲೀಲಿಲ್ಲ.”

” ಹಂಗಂತ ಅವರಿಗೇನಾ ಕಮ್ಮಿಯಾಗಿರೋದು ? ಈ ಸುತ್ತ ಮುತ್ತಲಿನಲ್ಲಿ, ಯಳಂದೂರು ಜಹಗೀರುದಾರನ್ನ ಬಿಟ್ಟರೆ, ಈ ಗತ್ತು, ಈ ಗಮ್ಮತ್ತು, ಯಾರಿಗುಂಟು ? ಅವರಿಗೆ ಇಂಗ್ಲೀಷ್ ಬಂದು ಅವರು ಅಧಿಕಾರ ಮಾಡಿದ್ದರೆ, ಅದು ನಮ್ಮ ಪುಣ್ಯಕ್ಕೆ ಆಯಿತಿತ್ತು.”

” ಈಗತಾನೇ ಏನಂತೆ ? ಇನ್ನೂ ಅವರಿಗೆ ಮುವ್ವತ್ತೋ ಮುವ್ವ ತ್ತೈದೋ ? ಈಗಲೂ ಕಲೀಬೇಕು ಅಂದರೆ ಬಹಳ ದೊಡ್ಡದಾ! ಅವರು ಮನಸ್ಸು ಮಾಡಲಿ. ಈ ಠಸ್ ಪುಸ್ ಹ್ಯಾಟ್ ಬೂಟ್ ಎಲ್ಲಾ ಒಂದೇ ವರುಷದಲ್ಲಿ ಕಲೀದಿದ್ದರೆ, ನನ್ನ ಹೆಸರು ಬೇರೆ ಇಡು.”

ಹೀಗೆ ಊರ ಅರಳಿಯ ಕಟ್ಟೆಯಮೇಲೆ ಎಲ್ಲರೂ ಎಳೆ ಬಿಸಿಲು ಕಾಯಿಸಿಕೊಳ್ಳುತ್ತ ಹರಟೆ ಹೊಡೆಯುತ್ತ ಕುಳಿತಿರುವಾಗ, ಕೆಂಪಿಯು ಅತ್ತ ಕಡೆ ನೀರಿಗೆ ಹರವಿ ತಕೊಂಡು ಹೊರಟಿದ್ದಳು. ಊರ ಗೌಡರೆಲ್ಲ ಕೂತಿರುವಾಗ ತಾನು ಬಿರುಬೀಸಾಗಿ ಹೊರಟರೆ ಆದೀತೆ ? ಮುಸುಕು ನೇರವಾಗಿ ತಲೆತುಂಬಾ ಹೊದೆದುಕೊಂಡು, ಸೆರಗು ಎಳೆದು ಕೊಂಡು ಮೈ ತುಂಬಾ ಹೊಡೆದುಕೊಂಡು, ತಲೆ ಬಗ್ಗಿಸಿಕೊಂಡು ಹೊರ ಟಳು. ಅಲ್ಲಿ ಅಡಕೆ ಹಾಕಿಕೊಂಡು ಹೊಗೆಸೊಪ್ಪು ತಿಕ್ಕುತ್ತ ಕುಳಿ ತಿದ್ದ ಗೌಡನೊಬ್ಬನು “ಏನು ಕೆಂಪಕ್ಕ, ನಿಮಗೂ ಪಯಣವಂತೆ ?” ಅಂದನು.

ಅವಳು ತನ್ನ ಸಂತೋಷವನ್ನು ಮುಚ್ಚಿಕೊಳ್ಳಲಾರದೆ, ಹೊರ ಸೂಸುವವಳಂತೆ ಮೊರದಗಲವಾಗಿರುವ ಮೊಕದ ತುಂಬಾ ನಗುವನ್ನು ಹಿಡಿತವಾಗಿ ನಗುತ್ತಾ, “ಏನೋ ಹಿರೀಕರ ಪುಣ್ಯ ನಿಮ್ಮ ಪಾದ. ನಿಮ್ಮೂರು ಬಂದು ಸೇರಿದೋ ; ನಿಮ್ಮ ಹೊಟ್ಟೆಯಲ್ಲಿ ಇಟ್ಟು ಕೊಂಡು ಕಾಪಾಡುತಿದೀರಿ.” ಅಂದು ಮುಂದೆ ಹೊರಟು ಹೋದಳು.

ಇನ್ನೊಬ್ಬನು “ಏನೇ ಅನ್ನು, ಮಾನವಂತೆ, ಹಲ್ಕಾಗಿಲ್ಕಾ ಅಲ್ಲ !” ಅಂದನು.

“ಅಂತಾ ಚೆಲ್ಲಾಟ ಆಡಿದ್ದರೆ, ನಮ್ಮೂರಲ್ಲಿ ನಿಲ್ಲಾಕೇ ಆಗುತಿರಲಿಲ್ಲ. ಒಂದೇ ದಿನ. ಓಡಿಸಿ ಬುಡುತ್ತಿದ್ದೊ! ಅದೂ ನಾಯ ಬುಟ್ಟು? ಅಂದ ಇನ್ನೊಬ್ಬ.

ಆ ಕೊನೆಯಲ್ಲಿ ಕೂತಿದ್ದವನ್ಕು “ಅವಳ ಮೊಕದ ಮೇಲೆ ಆ ರೂಪಾಯಗಲದ ಕುಂಕುಮ ಮೊಕದ ತುಂಬಾ ಅರತಿಣ, ನೋಡಿದರೆ, ಎಷ್ಟು, ಸಂತೋಷವಾಗುತ್ತದೆ ಅಂತೀಯಾ ?” ಅಂದೆ.

“ಎಲಾ! ಬಿಸಿಲಾಯಿತು. ಇನ್ನು ಹೊಲಗದ್ದೆ ಕಡೆ ನೋಡಿ ಕೊಂಡು ಬಸೋಕಿಲ್ಲವಾ? ಏಳೇಳಿ. ಹಗಲ ಮಾತು ಕೆಲಸ ಗೇಡು.”

ಎಲ್ಲರೂ ಎದ್ದು ಒದರಿಕೊಂಡು ಹೊರಟರು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...