Home / ಕವನ / ಕವಿತೆ / ಗುಡಿಯಾ

ಗುಡಿಯಾ

ಗುಡಿಯಾ ಆಟದ ಗೊಂಬೆಯಲ್ಲ
ರಕ್ತ ಮಾಂಸ ತುಂಬಿದ ಜೀವಂತ ಗೊಂಬೆ
ದುಃಖಕ್ಕೊಂದೇ ಹಕ್ಕು ಪಡೆದವಳು ಗುಡಿಯಾ
ನೋವಿನ ಕಡಲು ಒಡಲಲಿಟ್ಟುಕೊಂಡು
ನಾಪತ್ತೆಯಾದ ಪತಿ ಮರಳಿ ಬರುವ
ಹಾದಿ ಕಾಯ್ದಳು ದೀರ್‍ಘ ಕಾಲದ ತನಕ
ಕನಸು ಹುಸಿಹೋಯ್ತು ರೆಪ್ಪೆ ಭಾರವಾಯ್ತು.
ಹನಿಹನಿ ಉದುರಿಸಿ ಕಣ್ಣ ಕಿಂಡಿ ಬರಿದಾಯ್ತು
ಕೊನೆಗೆ ವಿದಾ ಹೇಳಿ ಮನದ ಕದವಿಟ್ಟುಕೊಂಡಳು.
ಮೌನ ಕಡಲಿಗೆ ಮರುಮಾತಿಲ್ಲದೆ ಶರಣಾದಳು
ಈಜಿದಳು ಭಯಂಕರ ಅಲೆಗಳಿಗೆ ಎದುರಾಗಿ
ನಕ್ಕಿದ್ದೇಷ್ಟೋ! ಬಿಕ್ಕಿದ್ದೆಷ್ಟೋ! ವಿರಹ
ಹಾಡಿದ್ದೇಷ್ಟೋ ಹಲುಬಿದ್ದೇಷ್ಟೋ ಗೀತೆ.

ಹರಿಯರಾಣತಿಯಂತೆ ಮರುಮದುವೆಯಾದಳು
ವಿಧಿಗೆ ತಲೆಬಾಗಿದಳು ಪುಟ್ಟ ಗುಡಿಯಾ
ಹೊತ್ತುನಿಂತಳು ಇವನ ಫಲಭಾರ
ಹೊಸ ಬದುಕಿನ ಬಾಗಿಲಲ್ಲಿ ಗಸ್ತುನಿಂತಳು.
ಮರಳಿ ಬಂದಿದ್ದ ಮೊದಲ ಪತಿ ಆರೀಫ್
ಮೈ ಮನಗಳಲ್ಲಿ ತೌಫಿಕನ ಬೆಳಕಿನ ಚುಳಕ
ವಿಧಿಯಾಟಕ್ಕೆ ಬೇಸ್ತು ಬಿದ್ದಳು ಗುಡಿಯಾ
ಸಂಕೀರ್‍ಣ ಬದುಕಿಗೆ ಎರವಾದಳು.

ಮೂಡಿದ ಮಿಡಿಗೆ ಅಗಲಿಕೆಯ ಭಯವೆ?
ಜೇನ ಸುರಿಯುವ ಬೊಚ್ಚು ಬಾಯಿಯ ಕೂಸು
ಹೆತ್ತಮ್ಮನ ಗುರುತಿಸಿ ಕೇಕೆ ಹಾಕುವ ಮುನ್ನ
ಒದ್ದು ಅಮ್ಮನ ಎದೆ ಹಾಲು ಹೆಕ್ಕುವ ಮುನ್ನ
ಜಮಾತಿನ ತೀರ್‍ಮಾನ ಹೊರಬಿತ್ತು
“ಕರುಳ ಬಳ್ಳಿಯನ್ನು ಇವನಿಗೊಪ್ಪಿಸಿ
ಮರಳಿ ಹೋಗಬೇಕು ಅವನಲ್ಲಿಗೆ”
ತೀರ್‍ಮಾನ ಕೇಳಿದ ಮೀನಾರಿನ ಮೈಕು
ಅಲ್ಲಾಹು ಎಂದು ಮೌನವಾಯಿತು.

ಭೂಮಿ ಎದೆ ಬರಿಯುವಂತೆ ರೊದಿಸಿದ
ಗುಡಿಯಾಳ ಆರ್‍ತ ಬಿಕ್ಕುಗಳ ಶಬ್ದ
ತಟ್ಟಲಿಲ್ಲವೆ ಜಮಾತಿನ ಹೃದಯಕೆ?
ಭೂಮಿ-ಆಗಸಕೆ, ತಾಯಿ ಮಗುವಿಗೆ
ಹಾಕಬಹುದೇ ಬಹಿಷ್ಕಾರ?
ಕಂಪಿಸಿದ ಗುಬ್ಬಿ ಹೃದಯ ಹಾಲಹಲ
ಕ್ರೌಂಚ ಪಕ್ಷಿಯ ಮೌನ ರೋದನ
ತಟ್ಟಲಾರದೇ ಜಮಾತಿನ ಕಟ್ಟೆಗೆ?

ಹೆಣ್ಣಿನ ಮಾತೃತ್ವ ಆಟದ ವಸ್ತುವೇನೆ?
ನಿಷೇಧದ ಬೇಲಿಗಳ ಕಿತ್ತೆಸೆದು
ಸೊಕ್ಕಿದ ಕೊಕ್ಕುಗಳ ಕತ್ತರಿಸಿ
ಶಕ್ತಿ ಒಗ್ಗೂಡಿಸಿ ಹೊರಗೆ ಬಾ ಗುಡಿಯಾ
ಬದುಕು ಮಾಧ್ಯಮದ ವಿಷಯವಲ್ಲ
ಚಪ್ಪರಿಸುವ ಸುದ್ದಿಯಲ್ಲ.
ಎದ್ದು ಹೇಳುಬಾ ನಿನ್ನದೇ ನಿರ್‍ಧಾರ.
ಕಿಕ್ಕಿರಿದ ಜಮಾತಿನ ಮಧ್ಯೆ
ಸಿಕ್ಕಲಾರರೇ ಒಬ್ಬರಾದರೂ ಸಂತರು
ನಿನ್ನ ನೋವ ಕರಗಿಸಿ
ಸಂತೈಸುವ ಪೈಗಂಬರರು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ