Home / ಕವನ / ಕವಿತೆ / ಗುಡಿಯಾ

ಗುಡಿಯಾ

ಗುಡಿಯಾ ಆಟದ ಗೊಂಬೆಯಲ್ಲ
ರಕ್ತ ಮಾಂಸ ತುಂಬಿದ ಜೀವಂತ ಗೊಂಬೆ
ದುಃಖಕ್ಕೊಂದೇ ಹಕ್ಕು ಪಡೆದವಳು ಗುಡಿಯಾ
ನೋವಿನ ಕಡಲು ಒಡಲಲಿಟ್ಟುಕೊಂಡು
ನಾಪತ್ತೆಯಾದ ಪತಿ ಮರಳಿ ಬರುವ
ಹಾದಿ ಕಾಯ್ದಳು ದೀರ್‍ಘ ಕಾಲದ ತನಕ
ಕನಸು ಹುಸಿಹೋಯ್ತು ರೆಪ್ಪೆ ಭಾರವಾಯ್ತು.
ಹನಿಹನಿ ಉದುರಿಸಿ ಕಣ್ಣ ಕಿಂಡಿ ಬರಿದಾಯ್ತು
ಕೊನೆಗೆ ವಿದಾ ಹೇಳಿ ಮನದ ಕದವಿಟ್ಟುಕೊಂಡಳು.
ಮೌನ ಕಡಲಿಗೆ ಮರುಮಾತಿಲ್ಲದೆ ಶರಣಾದಳು
ಈಜಿದಳು ಭಯಂಕರ ಅಲೆಗಳಿಗೆ ಎದುರಾಗಿ
ನಕ್ಕಿದ್ದೇಷ್ಟೋ! ಬಿಕ್ಕಿದ್ದೆಷ್ಟೋ! ವಿರಹ
ಹಾಡಿದ್ದೇಷ್ಟೋ ಹಲುಬಿದ್ದೇಷ್ಟೋ ಗೀತೆ.

ಹರಿಯರಾಣತಿಯಂತೆ ಮರುಮದುವೆಯಾದಳು
ವಿಧಿಗೆ ತಲೆಬಾಗಿದಳು ಪುಟ್ಟ ಗುಡಿಯಾ
ಹೊತ್ತುನಿಂತಳು ಇವನ ಫಲಭಾರ
ಹೊಸ ಬದುಕಿನ ಬಾಗಿಲಲ್ಲಿ ಗಸ್ತುನಿಂತಳು.
ಮರಳಿ ಬಂದಿದ್ದ ಮೊದಲ ಪತಿ ಆರೀಫ್
ಮೈ ಮನಗಳಲ್ಲಿ ತೌಫಿಕನ ಬೆಳಕಿನ ಚುಳಕ
ವಿಧಿಯಾಟಕ್ಕೆ ಬೇಸ್ತು ಬಿದ್ದಳು ಗುಡಿಯಾ
ಸಂಕೀರ್‍ಣ ಬದುಕಿಗೆ ಎರವಾದಳು.

ಮೂಡಿದ ಮಿಡಿಗೆ ಅಗಲಿಕೆಯ ಭಯವೆ?
ಜೇನ ಸುರಿಯುವ ಬೊಚ್ಚು ಬಾಯಿಯ ಕೂಸು
ಹೆತ್ತಮ್ಮನ ಗುರುತಿಸಿ ಕೇಕೆ ಹಾಕುವ ಮುನ್ನ
ಒದ್ದು ಅಮ್ಮನ ಎದೆ ಹಾಲು ಹೆಕ್ಕುವ ಮುನ್ನ
ಜಮಾತಿನ ತೀರ್‍ಮಾನ ಹೊರಬಿತ್ತು
“ಕರುಳ ಬಳ್ಳಿಯನ್ನು ಇವನಿಗೊಪ್ಪಿಸಿ
ಮರಳಿ ಹೋಗಬೇಕು ಅವನಲ್ಲಿಗೆ”
ತೀರ್‍ಮಾನ ಕೇಳಿದ ಮೀನಾರಿನ ಮೈಕು
ಅಲ್ಲಾಹು ಎಂದು ಮೌನವಾಯಿತು.

ಭೂಮಿ ಎದೆ ಬರಿಯುವಂತೆ ರೊದಿಸಿದ
ಗುಡಿಯಾಳ ಆರ್‍ತ ಬಿಕ್ಕುಗಳ ಶಬ್ದ
ತಟ್ಟಲಿಲ್ಲವೆ ಜಮಾತಿನ ಹೃದಯಕೆ?
ಭೂಮಿ-ಆಗಸಕೆ, ತಾಯಿ ಮಗುವಿಗೆ
ಹಾಕಬಹುದೇ ಬಹಿಷ್ಕಾರ?
ಕಂಪಿಸಿದ ಗುಬ್ಬಿ ಹೃದಯ ಹಾಲಹಲ
ಕ್ರೌಂಚ ಪಕ್ಷಿಯ ಮೌನ ರೋದನ
ತಟ್ಟಲಾರದೇ ಜಮಾತಿನ ಕಟ್ಟೆಗೆ?

ಹೆಣ್ಣಿನ ಮಾತೃತ್ವ ಆಟದ ವಸ್ತುವೇನೆ?
ನಿಷೇಧದ ಬೇಲಿಗಳ ಕಿತ್ತೆಸೆದು
ಸೊಕ್ಕಿದ ಕೊಕ್ಕುಗಳ ಕತ್ತರಿಸಿ
ಶಕ್ತಿ ಒಗ್ಗೂಡಿಸಿ ಹೊರಗೆ ಬಾ ಗುಡಿಯಾ
ಬದುಕು ಮಾಧ್ಯಮದ ವಿಷಯವಲ್ಲ
ಚಪ್ಪರಿಸುವ ಸುದ್ದಿಯಲ್ಲ.
ಎದ್ದು ಹೇಳುಬಾ ನಿನ್ನದೇ ನಿರ್‍ಧಾರ.
ಕಿಕ್ಕಿರಿದ ಜಮಾತಿನ ಮಧ್ಯೆ
ಸಿಕ್ಕಲಾರರೇ ಒಬ್ಬರಾದರೂ ಸಂತರು
ನಿನ್ನ ನೋವ ಕರಗಿಸಿ
ಸಂತೈಸುವ ಪೈಗಂಬರರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...