Home / ಕವನ / ಕವಿತೆ / ಗುಡಿಯಾ

ಗುಡಿಯಾ

ಗುಡಿಯಾ ಆಟದ ಗೊಂಬೆಯಲ್ಲ
ರಕ್ತ ಮಾಂಸ ತುಂಬಿದ ಜೀವಂತ ಗೊಂಬೆ
ದುಃಖಕ್ಕೊಂದೇ ಹಕ್ಕು ಪಡೆದವಳು ಗುಡಿಯಾ
ನೋವಿನ ಕಡಲು ಒಡಲಲಿಟ್ಟುಕೊಂಡು
ನಾಪತ್ತೆಯಾದ ಪತಿ ಮರಳಿ ಬರುವ
ಹಾದಿ ಕಾಯ್ದಳು ದೀರ್‍ಘ ಕಾಲದ ತನಕ
ಕನಸು ಹುಸಿಹೋಯ್ತು ರೆಪ್ಪೆ ಭಾರವಾಯ್ತು.
ಹನಿಹನಿ ಉದುರಿಸಿ ಕಣ್ಣ ಕಿಂಡಿ ಬರಿದಾಯ್ತು
ಕೊನೆಗೆ ವಿದಾ ಹೇಳಿ ಮನದ ಕದವಿಟ್ಟುಕೊಂಡಳು.
ಮೌನ ಕಡಲಿಗೆ ಮರುಮಾತಿಲ್ಲದೆ ಶರಣಾದಳು
ಈಜಿದಳು ಭಯಂಕರ ಅಲೆಗಳಿಗೆ ಎದುರಾಗಿ
ನಕ್ಕಿದ್ದೇಷ್ಟೋ! ಬಿಕ್ಕಿದ್ದೆಷ್ಟೋ! ವಿರಹ
ಹಾಡಿದ್ದೇಷ್ಟೋ ಹಲುಬಿದ್ದೇಷ್ಟೋ ಗೀತೆ.

ಹರಿಯರಾಣತಿಯಂತೆ ಮರುಮದುವೆಯಾದಳು
ವಿಧಿಗೆ ತಲೆಬಾಗಿದಳು ಪುಟ್ಟ ಗುಡಿಯಾ
ಹೊತ್ತುನಿಂತಳು ಇವನ ಫಲಭಾರ
ಹೊಸ ಬದುಕಿನ ಬಾಗಿಲಲ್ಲಿ ಗಸ್ತುನಿಂತಳು.
ಮರಳಿ ಬಂದಿದ್ದ ಮೊದಲ ಪತಿ ಆರೀಫ್
ಮೈ ಮನಗಳಲ್ಲಿ ತೌಫಿಕನ ಬೆಳಕಿನ ಚುಳಕ
ವಿಧಿಯಾಟಕ್ಕೆ ಬೇಸ್ತು ಬಿದ್ದಳು ಗುಡಿಯಾ
ಸಂಕೀರ್‍ಣ ಬದುಕಿಗೆ ಎರವಾದಳು.

ಮೂಡಿದ ಮಿಡಿಗೆ ಅಗಲಿಕೆಯ ಭಯವೆ?
ಜೇನ ಸುರಿಯುವ ಬೊಚ್ಚು ಬಾಯಿಯ ಕೂಸು
ಹೆತ್ತಮ್ಮನ ಗುರುತಿಸಿ ಕೇಕೆ ಹಾಕುವ ಮುನ್ನ
ಒದ್ದು ಅಮ್ಮನ ಎದೆ ಹಾಲು ಹೆಕ್ಕುವ ಮುನ್ನ
ಜಮಾತಿನ ತೀರ್‍ಮಾನ ಹೊರಬಿತ್ತು
“ಕರುಳ ಬಳ್ಳಿಯನ್ನು ಇವನಿಗೊಪ್ಪಿಸಿ
ಮರಳಿ ಹೋಗಬೇಕು ಅವನಲ್ಲಿಗೆ”
ತೀರ್‍ಮಾನ ಕೇಳಿದ ಮೀನಾರಿನ ಮೈಕು
ಅಲ್ಲಾಹು ಎಂದು ಮೌನವಾಯಿತು.

ಭೂಮಿ ಎದೆ ಬರಿಯುವಂತೆ ರೊದಿಸಿದ
ಗುಡಿಯಾಳ ಆರ್‍ತ ಬಿಕ್ಕುಗಳ ಶಬ್ದ
ತಟ್ಟಲಿಲ್ಲವೆ ಜಮಾತಿನ ಹೃದಯಕೆ?
ಭೂಮಿ-ಆಗಸಕೆ, ತಾಯಿ ಮಗುವಿಗೆ
ಹಾಕಬಹುದೇ ಬಹಿಷ್ಕಾರ?
ಕಂಪಿಸಿದ ಗುಬ್ಬಿ ಹೃದಯ ಹಾಲಹಲ
ಕ್ರೌಂಚ ಪಕ್ಷಿಯ ಮೌನ ರೋದನ
ತಟ್ಟಲಾರದೇ ಜಮಾತಿನ ಕಟ್ಟೆಗೆ?

ಹೆಣ್ಣಿನ ಮಾತೃತ್ವ ಆಟದ ವಸ್ತುವೇನೆ?
ನಿಷೇಧದ ಬೇಲಿಗಳ ಕಿತ್ತೆಸೆದು
ಸೊಕ್ಕಿದ ಕೊಕ್ಕುಗಳ ಕತ್ತರಿಸಿ
ಶಕ್ತಿ ಒಗ್ಗೂಡಿಸಿ ಹೊರಗೆ ಬಾ ಗುಡಿಯಾ
ಬದುಕು ಮಾಧ್ಯಮದ ವಿಷಯವಲ್ಲ
ಚಪ್ಪರಿಸುವ ಸುದ್ದಿಯಲ್ಲ.
ಎದ್ದು ಹೇಳುಬಾ ನಿನ್ನದೇ ನಿರ್‍ಧಾರ.
ಕಿಕ್ಕಿರಿದ ಜಮಾತಿನ ಮಧ್ಯೆ
ಸಿಕ್ಕಲಾರರೇ ಒಬ್ಬರಾದರೂ ಸಂತರು
ನಿನ್ನ ನೋವ ಕರಗಿಸಿ
ಸಂತೈಸುವ ಪೈಗಂಬರರು.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...