Home / ಕವನ / ಕವಿತೆ / ಒಂದು ಸಾವಿನ ಸುತ್ತ

ಒಂದು ಸಾವಿನ ಸುತ್ತ

ಪತ್ರಿಕೆಗಳು ಸುದ್ದಿ ಮಾಡಿದವು
ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು
ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ
ರಾತ್ರಿ ಕತ್ತಲೆಯಲಿ ನಡದೇ ಹೋಯ್ತು
ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ
ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ
ಮೆಟ್ರೋ ಮಹಿಳೆಯರ ಮೈಯಲ್ಲಿ ನಡುಕ.

ಜಾಗತಿಕ ಗ್ರಾಹಕರ ನೇರ ಸಮರ್‍ಪಕ
ಕಾಲ್‌ ಸೆಂಟರ್‌ಗಳ ಲೋಕ ಭಾವನಾತ್ಮಕ
ಹೈಟೆಕ್ ಸಂಸ್ಕೃತಿಗಳ ಹಿಂದೆ ಅಡಗಿರುವ
ನೂರಾರು ಗೈರತ್ತು-ಶಿಸ್ತಿನ ಕೊಕ್ಕುಗಳು
ದಾಟಲಾಗದು ಡೆಡ್‌ಲೈನ್‌ಗಳು
ಜೀವ ಹೋದರೂ ಸರಿಯೇ
ಹೊತ್ತಲ್ಲದ ಹೊತ್ತಿನಲ್ಲಿ ನಿರಂತರ ದುಡಿತ
ಮಾನಸಿಕ ಒತ್ತಡ, ರಕ್ಷಣೆ ಕೇಳಿದರೆ
ಕೆಲಸ ಹೋಗುವ ಭಯ
ದುಡಿಯಲೇಬೇಕಿದೆ ಹೊಟ್ಟೆಪಾಡಿದೆಯಲ್ಲ?
ಸಮಾನತೆಯ ಸೂತ್ರದಲ್ಲಿ ಬಂಧಿಸಿಯಾಗಿಸಿ
ಅವಳನು ಆಪತ್ತಿನ ಬಾಯಿಗೆ ದೂಡುವುದೇಕೆ?
ಜೀವನದಿಯಾಗಿ ತುಂಬಿ ಹರಿದವಳು
ಕರ್‍ಮ ಕಾಂಡಗಳ ಸಹಿಸಿ ಬತ್ತಬೇಕೇಕೆ?
ಸೂರ್‍ಯಶಿಕಾರಿಗೆ ಹೊರಟವಳ
ದಾರಿಗೆ, ಅಡ್ಡಗೋಡೆಗಳ ಒಡ್ಡುವುದೇಕೆ?
ಎಲ್ಲ ಸಾದಿಸಲು ಹೊರಟವಳಿಗೆ
ಇಲ್ಲವಾಗಿಸುವ ಹುನ್ನಾರವೇಕೆ?
ಅವಳ ಶ್ರಮ ಕಂಪನಿಗಳ ಲಾಭಕ್ಕಲ್ಲವೇ?
ಇರಲಿ ನಮ್ಮವನೇ ಚಾಲಕ ನಮ್ಮದೇ ಕಂಪನಿ
ವಿದೇಶಿಯರ ಲಾಭಕ್ಕೆ ಇನ್ನೆಷ್ಟು ಬಲಿಗಳು?
ಕತ್ತಲೆಯ ಗೋರಿಯಿಂದ ಎದ್ದು ಬಾರಮ್ಮ
ಅವರ ಪಾತಕದ ಒಂದೊಂದು ಬಿಲ್ಲೆಯ
ಲೆಕ್ಕವನೂ ಬಿಡದೇ ಕೇಳು ಬಾರಮ್ಮ
ಇಲ್ಲವಾದರೆ ಹೆಣ್ಣಗಳು ಹೇಗೆ ದುಡಿದಾರು?
ಭೂಮಿ ಮೇಲೆ ತಮ್ಮ ತುತ್ತನ್ನು
ತಾವು ಹೇಗೆ ಗಳಿಸಿಯಾರು?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...