Home / ಕವನ / ಕವಿತೆ / ಕಂಡಿದ್ದೇನೆ ನಾನು

ಕಂಡಿದ್ದೇನೆ ನಾನು

ಧರ್‍ಮದ ಠೇಕೇದಾರರಿಂದ
ಭೂಮಿಯ ಮೇಲೆ ದೆವ್ವದ ಕುಣಿತ
ನೋಡಿದ್ದೇನೆ ನಾನು!
ಗುಜರಾತಿನ ನರಮೇಧದಲ್ಲಿ
ಮನುಷ್ಯತ್ವದ ಕತ್ತು
ನಾಚಿಕೆಯಿಂದ ಕೆಳಗಾಗಿದ್ದನ್ನು
ಕಂಡಿದ್ದೇನೆ ನಾನು!
ಧರ್‍ಮ ರಾಜಕೀಯದಲಿ ಅಧರ್‍ಮದ
ಕತ್ತಿ ಝಾಳಪಿಸಿದ ಗುಜರಾತನು
ಕಣ್ಣಾರೆ ಕಂಡಿದ್ದೇನೆ ನಾನು!
ತುಂಬು ಗರ್‍ಭಿಣಿಯ ಹೊಟ್ಟೆಸೀಳಿ
ಹೊರ ತೆಗೆದ ಮಗುವಿಗೆ
ಚುಚ್ಚಿ ಚುಚ್ಚಿ ಸಾಯಿಸಿದ ಪಾತಕಿಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು
ಗುಜರಾತಿನ ರಾಜಬೀದಿಗಳಲ್ಲಿ
ಮಾನಿನಿಯ ಮಾನ ಹರಜಾದದ್ದನ್ನು
ಕಂಡಿದ್ದೇನೆ ನಾನು
ಯುವಕ, ಮುದುಕ, ಮಹಿಳೆಯರ
ರಕ್ತದ ಹೊಳೆ ಹರಿಸಿದ್ದನ್ನು
ಕಂಡಿದ್ದೇನೆ ನಾನು
ದೇಶ ವಿಭಜನೆಯಾದಾಗ
ತಾಪಿ, ನರ್‍ಮದೆಯ ಅಲೆಗಳಲ್ಲಿ
ತೇಲಿ ಹೋಗುತ್ತಿರುವ ಹೆಣಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು

ಸಾಯುವಾಗಿನ ನೋವಿನ ಆರ್‍ತನಾದ
ರಕ್ಷಕರ ಎದುರಿನಲ್ಲೇ ಬಿಕ್ಕುತ್ತಿರುವ
ಮನುಷ್ಯತ್ವದ ಕಂಡಿದ್ದೇನೆ ನಾನು
ಗುಜರಾತಿನ ಗಲ್ಲಿಗಳಲ್ಲಿ
ಸುಟ್ಟು ಕರಕಲಾಗುತ್ತಿರುವ
ಮನುಷ್ಯತ್ವ ಕಣ್ಣಾರೆ ಕಂಡಿದ್ದೇನೆ ನಾನು.

ಲೋಕವೇ ಕಣ್ಣಾರೆ ಕಂಡಿದೆ
ಗುಜರಾತಿನಲಿ ಕರಗಿ ಹೋದ
ಮಾನವೀಯತೆಯ ಚಿಗುರುಗಳ
ಅವನ ಅಂತ್ಯದ ದಿನಗಳಲಿ
ಕಟಕಟೆಯಲ್ಲಿ ನಿಲ್ಲಿಸಿ ಕೇಳುವೆ
ನಿರಪರಾಧಿಗಳ ರಕ್ತ ಹರಿಸಿದ್ದಕ್ಕೆ
ನಿನಗೆ ದೊರಕಿದ್ದಾದರೂ ಏನು?
ನಿನ್ನ ರಾಮನಿಗೆ ತೋರಿಸುವುದಕೆ
ನಿನಗೆ ಮುಖವಾದರೂ ಇದೆಯೇ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...