Home / ಕವನ / ಕವಿತೆ / ಕಂಡಿದ್ದೇನೆ ನಾನು

ಕಂಡಿದ್ದೇನೆ ನಾನು

ಧರ್‍ಮದ ಠೇಕೇದಾರರಿಂದ
ಭೂಮಿಯ ಮೇಲೆ ದೆವ್ವದ ಕುಣಿತ
ನೋಡಿದ್ದೇನೆ ನಾನು!
ಗುಜರಾತಿನ ನರಮೇಧದಲ್ಲಿ
ಮನುಷ್ಯತ್ವದ ಕತ್ತು
ನಾಚಿಕೆಯಿಂದ ಕೆಳಗಾಗಿದ್ದನ್ನು
ಕಂಡಿದ್ದೇನೆ ನಾನು!
ಧರ್‍ಮ ರಾಜಕೀಯದಲಿ ಅಧರ್‍ಮದ
ಕತ್ತಿ ಝಾಳಪಿಸಿದ ಗುಜರಾತನು
ಕಣ್ಣಾರೆ ಕಂಡಿದ್ದೇನೆ ನಾನು!
ತುಂಬು ಗರ್‍ಭಿಣಿಯ ಹೊಟ್ಟೆಸೀಳಿ
ಹೊರ ತೆಗೆದ ಮಗುವಿಗೆ
ಚುಚ್ಚಿ ಚುಚ್ಚಿ ಸಾಯಿಸಿದ ಪಾತಕಿಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು
ಗುಜರಾತಿನ ರಾಜಬೀದಿಗಳಲ್ಲಿ
ಮಾನಿನಿಯ ಮಾನ ಹರಜಾದದ್ದನ್ನು
ಕಂಡಿದ್ದೇನೆ ನಾನು
ಯುವಕ, ಮುದುಕ, ಮಹಿಳೆಯರ
ರಕ್ತದ ಹೊಳೆ ಹರಿಸಿದ್ದನ್ನು
ಕಂಡಿದ್ದೇನೆ ನಾನು
ದೇಶ ವಿಭಜನೆಯಾದಾಗ
ತಾಪಿ, ನರ್‍ಮದೆಯ ಅಲೆಗಳಲ್ಲಿ
ತೇಲಿ ಹೋಗುತ್ತಿರುವ ಹೆಣಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು

ಸಾಯುವಾಗಿನ ನೋವಿನ ಆರ್‍ತನಾದ
ರಕ್ಷಕರ ಎದುರಿನಲ್ಲೇ ಬಿಕ್ಕುತ್ತಿರುವ
ಮನುಷ್ಯತ್ವದ ಕಂಡಿದ್ದೇನೆ ನಾನು
ಗುಜರಾತಿನ ಗಲ್ಲಿಗಳಲ್ಲಿ
ಸುಟ್ಟು ಕರಕಲಾಗುತ್ತಿರುವ
ಮನುಷ್ಯತ್ವ ಕಣ್ಣಾರೆ ಕಂಡಿದ್ದೇನೆ ನಾನು.

ಲೋಕವೇ ಕಣ್ಣಾರೆ ಕಂಡಿದೆ
ಗುಜರಾತಿನಲಿ ಕರಗಿ ಹೋದ
ಮಾನವೀಯತೆಯ ಚಿಗುರುಗಳ
ಅವನ ಅಂತ್ಯದ ದಿನಗಳಲಿ
ಕಟಕಟೆಯಲ್ಲಿ ನಿಲ್ಲಿಸಿ ಕೇಳುವೆ
ನಿರಪರಾಧಿಗಳ ರಕ್ತ ಹರಿಸಿದ್ದಕ್ಕೆ
ನಿನಗೆ ದೊರಕಿದ್ದಾದರೂ ಏನು?
ನಿನ್ನ ರಾಮನಿಗೆ ತೋರಿಸುವುದಕೆ
ನಿನಗೆ ಮುಖವಾದರೂ ಇದೆಯೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...