Home / ಕವನ / ಕವಿತೆ / ಮಿಲೆ ಸುರ್ ಮೇರಾ ತುಮ್ಹಾರಾ

ಮಿಲೆ ಸುರ್ ಮೇರಾ ತುಮ್ಹಾರಾ

ಗಾನ ಗಂಧರ್‍ವ ಸೃಷ್ಟಿಸಿದ
ಸಂಗೀತ ಲೋಕದಲ್ಲಿ ಎದ್ದೆದ್ದು
ಬಡಿದ ಘನ ಗಂಭೀರ
ಸಮುದ್ರದಲೆಗಳು ಸ್ಥಬ್ಧವಾಗಿವೆ.

ಮಿಲೆ ಸುರ್ ಮೇರ್ ತುಮ್ಹಾರಾ
ತೊ ಸುರ್ ಬನೇ ಹಮಾರಾ
ಭಾರತವನ್ನೊಂದುಗೂಡಿಸಿದ ತತ್ವ
ಎಂತಹ ಮೋಡಿ ಆ ಗಾರುಡಿಗನದು?

ರೋಣದ ನೆಲದಲ್ಲಿ ಹುಟ್ಟಿದ
ಭಾರತ ರತ್ನದ ಧ್ವನಿಗೆ
ಬೇರೆ ಸರಿಸಾಟಿ ಬೇಕೆ?
ತನ್ನ ಧ್ವನಿಗೆ ತಾನೇ ಒಡೆಯ.

ನಾದ ದೇವತೆಯನು ನಂಬಿ
ಭಾಗ್ಯದ ಲಕ್ಷ್ಮೀಯನ್ನು ಕರೆದು
ಲೀನವಾದ ನಾದ ಬ್ರಹ್ಮ
ದೇಶದಲಿ ಆತ್ಮಸಾಕ್ಷಿ ಬಿಂಬಿಸಿದ
ತಕರಾರಿಲ್ಲದ ಸೌಜನ್ಯವಂತ ಸಂತ.

ಸುಡುಬಿಸಿಲಲಿ ಬರಿಗಾಲಿನ
ನಡಿಗೆ, ಗುರುಮನೆಗೆ ನೀರುಹೊತ್ತು
ಸಂಗೀತ ಕಲಿತ ಆ ಭೀಮ
ಶರೀರ ವೃದ್ಧವಾದರೇನಂತೆ
ಗಾಯಕನಿಗೆ ವೃದ್ಧಾಪ್ಯವಿಲ್ಲ.

ಬಡಕಲು ಶರೀರದ ಭೀಮ
ನಾದಬ್ರಹ್ಮನ ಕಿರುಣಾ ಘರಾಣಾ
ಭಾವಕ್ಕೆ ದನಿ ತುಂಬಿದ ಅಮರ ಕಾವ್ಯ
ಪರವಶಗೊಳಿಸಿದ ಬಂದಿಶ್ ಮಾಂತ್ರಿಕ.

ನಾದದಲಿ ಭೀಷ್ಮ ಪಿತಾಮಹ
ಸಂಗೀತ ಲೋಕದ ತಾನಸೇನ
ಭೈರವಿ ಹಾಡಿ ಬದುಕಿಗೆ ವಿದಾಯ
ಹೃದಯದಲಿ ನೆಲೆ ನಿಂತವನು
ಗಡಿಗಳ ಸಿಮೋಲ್ಲಂಘನ.

ಮರೆಯದ ಮಾಣಿಕ್ಯದ ಕಣ್ಮರೆ
ನಾದ ಲೋಕವೊಂದರ ಯುಗಾಂತ್ಯ
ಮಾಧುಟ್ಯ ಸೂರ್‍ಯನ ಅಂತ್ಯ
ಸಾಧನೆಗೆ ಸೀಮೆಗಳ ನಿರ್‍ಬಂಧವಿಲ್ಲ
ಗಾಯನಶಾಶ್ವತ, ದೇಹ ನಶ್ಚರ.

ಮೌನವಾಗಿ ಲೀನವಾಗಿದೆ
ಹಿಮಾಲಯದ ಮೇರು ಶಿಖರ.
ಸೂರ್‍ಯ ಅಸ್ತಂಗತನಾದ ಸುದ್ದಿ ಕೇಳಿ
ಅಲ್ಲಾಡದೇ ನಿಂತಿವೆ ನೋಡು
ಗಿರಿ, ಶಿಖರ, ಗಾಳಿ, ನದಿ, ಲೋಕ
ಸಾವು ನಿಶ್ಚಿತ, ಧ್ವನಿ ಅಮರ.
*****
(ಭೀಮ್‌ ಸೇನ್ ಜೋಶಿಯವರು ನಿಧನರಾದ ಸಂದರ್‍ಭ)

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...