Home / ಕವನ / ಕವಿತೆ / ಮಿಲೆ ಸುರ್ ಮೇರಾ ತುಮ್ಹಾರಾ

ಮಿಲೆ ಸುರ್ ಮೇರಾ ತುಮ್ಹಾರಾ

ಗಾನ ಗಂಧರ್‍ವ ಸೃಷ್ಟಿಸಿದ
ಸಂಗೀತ ಲೋಕದಲ್ಲಿ ಎದ್ದೆದ್ದು
ಬಡಿದ ಘನ ಗಂಭೀರ
ಸಮುದ್ರದಲೆಗಳು ಸ್ಥಬ್ಧವಾಗಿವೆ.

ಮಿಲೆ ಸುರ್ ಮೇರ್ ತುಮ್ಹಾರಾ
ತೊ ಸುರ್ ಬನೇ ಹಮಾರಾ
ಭಾರತವನ್ನೊಂದುಗೂಡಿಸಿದ ತತ್ವ
ಎಂತಹ ಮೋಡಿ ಆ ಗಾರುಡಿಗನದು?

ರೋಣದ ನೆಲದಲ್ಲಿ ಹುಟ್ಟಿದ
ಭಾರತ ರತ್ನದ ಧ್ವನಿಗೆ
ಬೇರೆ ಸರಿಸಾಟಿ ಬೇಕೆ?
ತನ್ನ ಧ್ವನಿಗೆ ತಾನೇ ಒಡೆಯ.

ನಾದ ದೇವತೆಯನು ನಂಬಿ
ಭಾಗ್ಯದ ಲಕ್ಷ್ಮೀಯನ್ನು ಕರೆದು
ಲೀನವಾದ ನಾದ ಬ್ರಹ್ಮ
ದೇಶದಲಿ ಆತ್ಮಸಾಕ್ಷಿ ಬಿಂಬಿಸಿದ
ತಕರಾರಿಲ್ಲದ ಸೌಜನ್ಯವಂತ ಸಂತ.

ಸುಡುಬಿಸಿಲಲಿ ಬರಿಗಾಲಿನ
ನಡಿಗೆ, ಗುರುಮನೆಗೆ ನೀರುಹೊತ್ತು
ಸಂಗೀತ ಕಲಿತ ಆ ಭೀಮ
ಶರೀರ ವೃದ್ಧವಾದರೇನಂತೆ
ಗಾಯಕನಿಗೆ ವೃದ್ಧಾಪ್ಯವಿಲ್ಲ.

ಬಡಕಲು ಶರೀರದ ಭೀಮ
ನಾದಬ್ರಹ್ಮನ ಕಿರುಣಾ ಘರಾಣಾ
ಭಾವಕ್ಕೆ ದನಿ ತುಂಬಿದ ಅಮರ ಕಾವ್ಯ
ಪರವಶಗೊಳಿಸಿದ ಬಂದಿಶ್ ಮಾಂತ್ರಿಕ.

ನಾದದಲಿ ಭೀಷ್ಮ ಪಿತಾಮಹ
ಸಂಗೀತ ಲೋಕದ ತಾನಸೇನ
ಭೈರವಿ ಹಾಡಿ ಬದುಕಿಗೆ ವಿದಾಯ
ಹೃದಯದಲಿ ನೆಲೆ ನಿಂತವನು
ಗಡಿಗಳ ಸಿಮೋಲ್ಲಂಘನ.

ಮರೆಯದ ಮಾಣಿಕ್ಯದ ಕಣ್ಮರೆ
ನಾದ ಲೋಕವೊಂದರ ಯುಗಾಂತ್ಯ
ಮಾಧುಟ್ಯ ಸೂರ್‍ಯನ ಅಂತ್ಯ
ಸಾಧನೆಗೆ ಸೀಮೆಗಳ ನಿರ್‍ಬಂಧವಿಲ್ಲ
ಗಾಯನಶಾಶ್ವತ, ದೇಹ ನಶ್ಚರ.

ಮೌನವಾಗಿ ಲೀನವಾಗಿದೆ
ಹಿಮಾಲಯದ ಮೇರು ಶಿಖರ.
ಸೂರ್‍ಯ ಅಸ್ತಂಗತನಾದ ಸುದ್ದಿ ಕೇಳಿ
ಅಲ್ಲಾಡದೇ ನಿಂತಿವೆ ನೋಡು
ಗಿರಿ, ಶಿಖರ, ಗಾಳಿ, ನದಿ, ಲೋಕ
ಸಾವು ನಿಶ್ಚಿತ, ಧ್ವನಿ ಅಮರ.
*****
(ಭೀಮ್‌ ಸೇನ್ ಜೋಶಿಯವರು ನಿಧನರಾದ ಸಂದರ್‍ಭ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...