Home / ಕಥೆ / ಆತ್ಮ ಕಥೆ / ಕಾಡುತಾವ ನೆನಪುಗಳು – ೨೫

ಕಾಡುತಾವ ನೆನಪುಗಳು – ೨೫

ಮಾರನೆಯ ದಿನ ಔಟ್‌ಪೇಶೆಂಟ್ ವಿಭಾಗದಲ್ಲಿ ರೋಗಿಗಳಿಂದ ನನಗೆ ಫೋನ್ ಬಂದಿತ್ತು. ನನಗೆ ‘ಆಕೆ’ಯದೇ ಫೋನ್ ಇರಬೇಕು ಎನ್ನಿಸಿತ್ತು. ರೆಸೆಪ್ಷನ್ ಕೌಂಟರ್‌ಗೆ ಬಂದು ಫೋನನ್ನು ಕೈಗೆತ್ತಿಕೊಂಡಿದ್ದೆ.

“ಹಲೋ…”

“ನಾನು ಮೇಡಂ… ಬೌರಿಂಗ್ ಆಸ್ಪತ್ರೆಯಿಂದ ಮಾತಾಡ್ತಾ ಇದ್ದೀನಿ…”

“ಹೇಳಿ…”

“ನೀವು ಬೇಜಾರಾಗೋಲ್ಲ ತಾನೆ?”

“ಪೇಶೆಂಟ್ಸ್ ತುಂಬಾ ಇದ್ದಾರೆ, ಏನೂಂತ ಹೇಳಿ…”

“ನಿಮ್ಮ ಯಜಮಾನರಿಗೆ ನನ್ನ ಕಂಡರೆ ತುಂಬಾ ಇಷ್ಟವಂತೆ…”

“ಸರಿ…”

“ನೀವು ಡೈವೋರ್ಸ್ ಕೊಟ್ಟರೆ ನನ್ನನ್ನು ಮದ್ಎವಯಾಗ್ತಾರಂತೆ…”

“ಅಷ್ಟೇ ತಾನೆ? ಕೊಡ್ತೀನಿ ಬಿಡಿ…”

“ನಿಜವಾಗ್ಲೂನಾ?”

“ಸುಳ್ಳು ಹೇಳೋದು ತುಂಬಾ ಕಡಿಮೆ.”

“ತುಂಬಾ ಥ್ಯಾಂಕ್ಸ್ ಮೇಡಂ…”

ಟೆಲಿಫೋನನ್ನು ಕೆಳಗಿಟ್ಟು ಔಟ್ ಪೇಶಂಟ್ ವಿಭಾಗಕ್ಕೆ ಬಂದಿದ್ದೆ. ನಾನು ಸ್ವಲ್ಪವೂ ವಿಚಲಿತಳಾಗಿರಲಿಲ್ಲ. ಮುಂದಿನ ಕಾರ್ಯಗಳ ಬಗ್ಗೆ ಯೋಚಿಸಬೇಕಿತ್ತು.

ನನಗೆ ಪರಿಚಯವಿದ್ದ ವಕೀಲರ ಬಳಿ ವಿಷಯ ತಿಳಿಸಿ ಡೈವೋರ್ಸ್ ಹಾಕುವ ‘ಫಾರಂ’ಗಳನ್ನು ತೆಗೆದುಕೊಂಡು ಆ ದಿನ ರಜೆ ಹಾಕಿ ಬೆಂಗಳೂರಿನ ಮನೆಗೆ ಬಂದಿದ್ದೆ. ‘ಅವನು’ ಎಲ್ಲಿಗೋ ಹೊರಡಲು ತಯಾರಾಗಿದ್ದ. ನನ್ನನ್ನು ನೋಡಿ ಕುಳಿತುಕೊಂಡಿದ್ದ. ನಾನು ಅವನ ಮುಂದೆ ಕುಳಿತು ವಿಚ್ಛೇದನದ ಪತ್ರಗಳನ್ನು ಹೊರ ತೆಗೆದಿದ್ದೆ.

“ಈ ಪೇಪರ್ಸ್ ಒಂದ್ಸಾರಿ ಓದಿ ಸಹಿ ಮಾಡಿಬಿಡು…” ಎಂದಿದ್ದೆ.

“ಏನು ಪೇಪರ್ಸ್?” ಆಶ್ಚರ್ಯದಿಂದ ಕೇಳಿದ್ದ.

“ಡೈವೋರ್ಸ್ ಪೇಪ‌ರ್ಸ್ಗಳು…”

“……..”

“ಇಬ್ಬರೂ ಒಪ್ಪಿಗೆಯಿಂದ ಒಟ್ಟಿಗೆ ಸಹಿ ಮಾಡಿ ಅಪ್ಲಿಕೇಷನ್ಸ್ ಹಾಕಿದರೆ ಡೈವೋರ್ಸ್ ಯಾವ ತಕರಾರು ಇಲ್ಲದೆ ಬೇಗ ಮುಗಿಯುತ್ತಂತೆ…”

“ನಾನು ಕೇಳಿರಲಿಲ್ಲ…”

“ನಾನು ಕೇಳ್ತಾ ಇದ್ದೀನಲ್ಲ. ನೀನು ನಿನಗಿಷ್ಟವಾದ ಬದುಕನ್ನು ಆರಿಸಿಕೊಂಡು ಸುಖವಾಗಿರು. ನನ್ನಿಂದ ನಿನ್ನನ್ನು ಬಿಡುಗಡೆಗೊಳಿಸ್ತಾಯಿದ್ದೀನಿ…”

“……..”

“ಇಲ್ಲಿ… ನಿನ್ನ ಸಹಿ ಮಾಡಿಬಿಡು…”

“ನನಗಿಷ್ಟವಿಲ್ಲ…”

“ನನಗಿಷ್ಟವಿದೆ. ಜಗ್ಗಾಡಿ, ಎಳೆದಾಡಿ ಬದುಕಿದ್ದು ಸಾಕಾಗಿ ಹೋಗಿದೆ. ನೀನಗೂ ಸುಖವಿಲ್ಲ… ನಾನೂ ಸುಖವಾಗಿಲ್ಲ ಅನ್ನೋದಕ್ಕಿಂತಾ ನೆಮ್ಮದಿ ಇಲ್ಲಾ. ನೀನು ಯಾವುದೋ ಪಂಜರದಲ್ಲಿದ್ದವನಂತೆ ಪರದಾಡುವುತ್ತಿರುವುದು ನನಗೆ ತಿಳಿದಿದೆ. ನನ್ನದೇ ತಪ್ಪಾಗಿದೆ. ಕ್ಷಮಿಸಿಬಿಡು. ನಿನಗಿಷ್ಟವಾದಂತೆ ಬದುಕು…”

ಅಸಮಾಧಾನ, ಅಸಹನೆಯಿಂದ ಅವನ ಮುಖ ಗಂಟಿಕ್ಕಿತ್ತು. ಆದರೂ ಪೇಪರ್ಸಗಳ ಮೇಲೆ ಸಹಿ ಮಾಡಿದ್ದ.

“ನನಗೆ ಮೋಸ ಮಾಡಿಬಿಟ್ಟಿರಿ…”

“ಇಲ್ಲ… ಇಬ್ಬರಿಗೂ ಬದುಕಿನಿಂದ ಮೋಸವಾಗಿದೆ. ಇಬ್ಬರ ಆಯ್ಕೆಯೂ ಸರಿಯಾಗಿರಲಿಲ್ಲ. ಯಾವುದೋ ಆತಂಕ ಒತ್ತಡದಿಂದ ನಿನಗೆ ಕೇಳಿಕೊಂಡಿದ್ದೆ. ನನ್ನನ್ನು ಕ್ಷಮಿಸಿಬಿಡು…”

ನಾನು ಕನಕಪುರಕ್ಕೆ ಹೊರಡಲು ಎದ್ದು ನಿಂತಿದ್ದೆ. ಅವನಿನ್ನೂ ಕುಳಿತೇ ಇದ್ದ.

“ಡೈವೋರ್ಸ್‌ಗೆ ಹಾಕಿದ ಮೇಲೆ ಒಟ್ಟಿಗೇ ಇರಬಾರದಂತೆ. ನೀನು ಹೊರಡಲು ತಯಾರಾದ ನಂತರ ತಿಳಿಸು…”- ನನ್ನ ಮಾತುಗಳಿನ್ನೂ ಮುಗಿದಿರಲಿಲ್ಲ, ಅವನು ಧಿಗ್ಗನೆ ಎದ್ದು ನಿಂತು,

“ಈಗಲೇ ಹೋಗ್ತಾಯಿದ್ದೀನಿ…” ಎಂದು ಕೋಪದಿಂದ ಹೇಳುತ್ತಾ

ದಢದಢನೆ ರೂಮಿನೊಳಗೆ ಹೋಗಿ, ತನ್ನೆಲ್ಲಾ ಬಟ್ಟೆಗಳನ್ನು ಬೀರುವಿನಿಂದ ಎಳೆದು ಹಾಕಿದ್ದ. ಮುಖ ಧುಮುಗುಟ್ಟುತ್ತಿತ್ತು. ಎಲ್ಲವನ್ನೂ ಸೂಟ್‌ಕೇಸ್‌ಗಳಲ್ಲಿ ತುಂಬಿಕೊಂಡು ಬಂದು ನನ್ನೆದುರಿಗೆ ನಿಂತು,

“ನಿಮ್ಮ ಮನೆಯಿಂದ ನಾನು ಏನನ್ನೂ ತೆಗೆದುಕೊಂಡು ಹೋಗ್ತಾಯಿಲ್ಲ. ಒಂದ್ಸಾರಿ ನೋಡ್ಕೊಳ್ಳಿ…”-ಎಂದು ಹೇಳುವಾಗ ಅವನ ದನಿಯಲ್ಲಿ ಕಂಪನವಿತ್ತಾ? ನೆನಪಿಲ್ಲ.

“ನಾನು ಹೋಗ್ತಾಯಿದ್ದೀನಿ… ಇನ್ಮೇಲೆ ಸುಖವಾಗಿರಬಹುದು…” – ಎಂದು, ಮುಂದಿನ ಬಾಗಿಲನ್ನು ತೆರೆದು ಹಿಂದೆಯೇ ದಢಾರೆಂದು ಮುಚ್ಚಿ ಸೂಟ್‌ ಕೇಸ್ ಗಳೊಂದಿಗೆ ಹೋಗಿಬಿಟ್ಟಿದ್ದ.

ಸ್ವಲ್ಪ ಹೊತ್ತು ಸುಮ್ಮನೇ ಕುಳಿತಿದ್ದ ನಾನು ಕನಕಪುರದ ಬಸ್ತ್ ಹತ್ತಿದ್ದೆ. ಎದೆಯ ಭಾರ ಇಳಿದು ಹೋದಂತಾಗಿತ್ತು…!
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...