Home / ಕವನ / ಕವಿತೆ / ಮುಮ್ತಾಜಳ ಮಹಲು

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಭವ್ಯ ಇಮಾರತ್ತು ಕಟ್ಟಿಸಿ
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು.
ಆದರೆ ನನ್ನ ಪ್ರಿಯತಮನ
ಹೃದಯದಲೇ ಕಟ್ಟಿಸಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್
ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್‍ಪದ ಮೊಹರುಗಳು ಕಂಡಾವು
ಯಮುನೆಯ ತೀರದಲ್ಲೊಮ್ಮೆ
ನಿಂತು ಕಣ್ಣುಬಿಟ್ಟು ಸುತ್ತಲೂ
ನೋಡು ಮುಮ್ತಾಜ್
ಅಲ್ಲಿ ನಿನಗೆ ತಿಳಿಜಲದ ಯಮುನೆ
ಶಹೀದಾದ ವೀರ ಸೈನಿಕರ ರಕ್ತದಿಂದ
ಕೆಂಪುದಾದ ಕಂಡೀತು!
ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಏನೆಂದು
ಎಲ್ಲರಿಗೂ ಗೊತ್ತು
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೆಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತ ಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡ ಶಿಲ್ಪಿಗಳ ಆಕ್ರಂಧನಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಭವ್ಯ ತಾಜಮಹಲಿನ
ಮೀನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಗೋರಿಗಳಲ್ಲಿ ಗುನುಗುಟ್ಟುತ್ತದೆ
ನಿನ್ನ ಬಾದಶಹನ ಹೃದಯದಲಿ
ನಿನೊಬ್ಬಳೇನೂ ಅಲ್ಲ ಮುಮ್ತಾಜ್
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲಿ ಮೈಮರೆವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕೀಕತ್ತುಗಳಿಂದ
ಸುತ್ತುವರಿದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...