Home / ಕವನ / ಕವಿತೆ / ಮುಮ್ತಾಜಳ ಮಹಲು

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಭವ್ಯ ಇಮಾರತ್ತು ಕಟ್ಟಿಸಿ
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು.
ಆದರೆ ನನ್ನ ಪ್ರಿಯತಮನ
ಹೃದಯದಲೇ ಕಟ್ಟಿಸಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್
ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್‍ಪದ ಮೊಹರುಗಳು ಕಂಡಾವು
ಯಮುನೆಯ ತೀರದಲ್ಲೊಮ್ಮೆ
ನಿಂತು ಕಣ್ಣುಬಿಟ್ಟು ಸುತ್ತಲೂ
ನೋಡು ಮುಮ್ತಾಜ್
ಅಲ್ಲಿ ನಿನಗೆ ತಿಳಿಜಲದ ಯಮುನೆ
ಶಹೀದಾದ ವೀರ ಸೈನಿಕರ ರಕ್ತದಿಂದ
ಕೆಂಪುದಾದ ಕಂಡೀತು!
ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಏನೆಂದು
ಎಲ್ಲರಿಗೂ ಗೊತ್ತು
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೆಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತ ಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡ ಶಿಲ್ಪಿಗಳ ಆಕ್ರಂಧನಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಭವ್ಯ ತಾಜಮಹಲಿನ
ಮೀನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಗೋರಿಗಳಲ್ಲಿ ಗುನುಗುಟ್ಟುತ್ತದೆ
ನಿನ್ನ ಬಾದಶಹನ ಹೃದಯದಲಿ
ನಿನೊಬ್ಬಳೇನೂ ಅಲ್ಲ ಮುಮ್ತಾಜ್
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲಿ ಮೈಮರೆವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕೀಕತ್ತುಗಳಿಂದ
ಸುತ್ತುವರಿದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...