Home / ಕವನ / ಕವಿತೆ / ಪರದೆಯ ಹಿಂದೆ

ಪರದೆಯ ಹಿಂದೆ

ದರ್‍ಗಾದ ಎರಡು ಘನ ಗಂಭೀರ
ಮೀನಾರುಗಳ ಮುಂದೆ ಸಾಲು ಸಾಲು ಮನೆಗಳು
ಬಾಗಿಲಿಗೆ ಕಟ್ಟಿದ ಗೋಣಿ ತಟ್ಟಿನ ಪರದೆಗಳು
ಬಣ್ಣಗಳಿಲ್ಲ ಚಿತ್ತಾರಗಳಿಲ್ಲ, ಭಣಗುಟ್ಟುವ
ಬದುಕನು ಸಾರಿ ಸಾರಿ ಹೇಳುತ್ತಿದ್ದವು.
ಹಬ್ಬ ಹುಣ್ಣಿಮೆ ಬಂದಾಗ ಒಳಬಾಗಿಲಿಗೆ
ಅಮ್ಮಿ ಕಟ್ಟುತ್ತಿದ್ದಳು ಕಸೂತಿ ಹಾಕಿದ ಚಿತ್ತಾರದ
ರಂಗುರಂಗಿನ ಬಾಗಿಲ ಪರದೆಗಳು.
ಅದಕ್ಕೆ ಇಳಿಬಿಟ್ಟ ಬಣ್ಣ ಬಣ್ಣದ ಕುಚ್ಚುಗಳು
ನಾನೂ ಕ್ರೋಶಾದಲಿ ಹೆಣೆಯುವಾಸೆ
ಬಣ್ಣ ಬಣ್ಣದ ದಾರಗಳ ಚಿತ್ತಾಕರ್‍ಷಕ ಪರದೆ
ನನಗೇನು ಗೊತ್ತಿತ್ತು ಮುಂದೊಂದು ದಿನ
ಈ ಪರದೆಯೇ ನನ್ನ ಮುಖಕ್ಕೆ
ಮರೆ ಮಾಡುವ ನಖಾಬ್ ಆಗುತ್ತದೆ ಎಂದು?

ಮೊದಲ ಬಾರಿ ಈ ಹಿಜಾಬು ಧರಿಸಿದಾಗ
ಶಕೆಯಿಂದ ಸಿಡಿಮಿಡಿಗೊಂಡು ತಲೆ ಸುತ್ತು ಬಂದು
ನನಗರಿವಿಲ್ಲದಂತೆಯೇ ಕಿತ್ತು ಬಿಸಾಕಿದ್ದೆ.
ಬುದ್ಧಿ ಹೇಳಿದ ಬಂಧು ಬಾಂಧವರು
ಇದು ನಮ್ಮ ಧರ್‍ಮದ ಪವಿತ್ರ ಉಡುಪು
ಬಿಡುವುದು ಅಲ್ಲಾಹನಿಗೆ ಸುತಾರಾಂ ಇಷ್ಟವಿಲ್ಲ.
ಮತ್ತೆ ಪರದೆಯ ಹಿಂದೆ ದೂಡಿದರು.
ಬುರ್‍ಖಾದ ಜಾಳಿಗೆ ನನ್ನ ಕಣ್ಣನ್ನು ಮುಚ್ಚಿದಾಗ
ಇಡೀ ಲೋಕವೇ ಕಪ್ಪಾಗಿ ಕಂಡಿತ್ತು.
ಸಾಕಿದ ಬೆಕ್ಕು, ನಾಯಿಗಳಿಗೆ ನೆರೆಹೊರೆಯವರಿಗೆ,
ಶಾಲೆಯ ಸೀತೆಗೂ ನಾನು ಅಪರಿಚಿತಳಾಗಿದ್ದೆ.
ಆಗ ಸಹಚರರೆಲ್ಲ ದೂರವಾದಂತೆ ಭಾಸವಾಗಿತ್ತು.
ನನ್ನ ಜಗತ್ತಿನಲಿ ಕತ್ತಲಾವರಿಸಿದಂತಾಗಿತ್ತು.
ಪರದೆ ನನ್ನ ಸುತ್ತಲೂ ಬೇಲಿ ತನ್ನಷ್ಟಕ್ಕೇ ನಿರ್‍ಮಿಸಿತ್ತು.

ರಕ್ಷಣೆಯ ಕ್ರೂರ ಪಹರೆಯ ಗೋಡೆ
ಬೇಸಿಗೆ ಬಿಸಿಲಿಗೆ ಬೆವರಿನ ತೊಪ್ಪೆ,
ಯಮಯಾತನೆಗೆ ಉಸಿರುಗಟ್ಟುವ ಹಿಂಸೆ.
ಪಹರೆ ಗೋಡೆಗಳ ಮಧ್ಯೆ ಚಹರೆ ಮುಸುಕಿನಲಿ
ಪರದೆ ಹೊದ್ದು ಮಾಂಸದ ಮುದ್ದೆಯಾಗಿದ್ದೆ.
ಜೀವಪೋಷಕ ಧಾತುವಿನ ಸತುವು ನಾನು
ಪೋಷಿಸಬಲ್ಲೆ ಲೋಕವನ್ನು ಸಾಯಿಸಲಾರೆ.
ಜೀವನದಿಯಾಗಿ ಹರಿದು ತಪ್ತ ಆತ್ಮಗಳಿಗೆ
ತಂಪನ್ನೆರೆದು ಅಮೃತ ಸಿಂಚನಗೈದಳು
ಶತಮಾನಗಳಿಂದ ಕಾದು ಕೆಂಪಾದ ಧರೆಗೆ
ಮಳೆಯ ಸಿಂಚನವಾಗಿ ತಣ್ಣಗಾಗಿಸಿದವಳು.
ನನಗೆ ಗೊತ್ತಿದೆ ಬದುಕುವುದು ಹೇಗೆಂದು
ನಿರ್‍ಬಂಧಗಳ ಸರಹದ್ದು ಮೀರುವುದು ಹೇಗೆಂದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...