Home / ಕವನ / ಕವಿತೆ / ಸ್ವಾತಂತ್ರ್ಯ ಎಂದರೇನು

ಸ್ವಾತಂತ್ರ್ಯ ಎಂದರೇನು

ಅವರು ಹೆತ್ತು ಹೆತ್ತು ನಲುಗಿದ ಹೆಣ್ಣುಗಳು
ದುಡಿದು ದುಡಿದು ಸವೆದು ಹೋದ ದೇಹಗಳು
ಸಹಿಸಿ ಸಹಿಸಿ ಸುಣ್ಣವಾದ ಅವರ ಮನಸುಗಳು
ಸುತ್ತಲೂ ಎತ್ತರೆತ್ತರದ ಪಹರೆ ಗೋಡೆಗಳು
ಉಸಿರುಗಟ್ಟಿಸುವ ನಿಯಮಗಳು
ನಡುವೆ ಸಮಾಧಿಯಾದ ಬದುಕು.
ಗೋಡೆಯಾಚೆ ತೂಗುತ್ತಿದೆ ನೋಡು
ನಿರಂತರ ತಲ್ಲಾಖಿನ ಕತ್ತಿ
ಅದು ಯಾವಾಗ ಬೇಕಾದರೂ
ಅವಳ ಕತ್ತು ಕೊಯ್ಯುತ್ತದೆ.
ಪ್ರಪಂಚದ ಓದು ಅವಳಿಗೇಕೆ?
ಖುರಾನ್ ಓದು ಸಾಕು.
ಧರ್‍ಮ ಉಸ್ತುವಾರಿಯ ನಡುವೆ
ನಲುಗಿದ ಅವಳ ಬಾಲ್ಯ,
ನಾಟಿ ಕೋಳಿಗೆ ದಕ್ಕುವ
ವಿವಿಧ ಕಾಳಿನ ವೈವಿಧ್ಯ
ಹೆಕ್ಕಿ ತಿನ್ನುವ ಅವಕಾಶ
ಫಾರಂ ಕೋಳಿಗೆ ಎಲ್ಲಿ?
ಹಾಕಿದ ಫೀಡ್ಸ್, ನಿಂತ ನೀರನ್ನೇ ಕುಡಿದು,
ಪಂಜರದಲ್ಲಿ ಬಂಧಿ ಅವಳಿಗೆ
ಹೇಗೆ ದಕ್ಕಿತು ಸ್ವಾತಂತ್ರ್ಯ
ಬೆಳ್ಳಗೆ ಫಾರಮ್‌ ಕೋಳಿಯಂತಹ
ಬಿಳಿ ಹೆಂಡತಿ ಅವನ ಹೆಮ್ಮೆಯ ಆಯ್ಕೆ ನಿಜ.
ಇವಳಲ್ಲ, ಇನ್ನೊಬ್ಬಳು ಇದ್ದೇ ಇದೆಯಲ್ಲ!
ನಾಲ್ಕರತನಕದ ಗಡುವು ನಿರಾಳ
ಫಾರಂ ಕೋಳಿಗೆ ಕತ್ತಲ
ಗವಿಯ ಇಕ್ಕಟ್ಟಿನ ಬದುಕು
ಸೂರ್‍ಯ ಕಿರಣ ತಾಕದೇ
ವಿದ್ಯುತ್‌ ಬಲ್ಬಿನ ಬೆಳಕು
ಯಾವ ವಸಂತದ ರುಚಿಯೂ ಕಾಣದಿರುವ
ಅದರ ಬದುಕು ನಿರ್‍ಬಂಧಿತ
ಸರಪಳಿಗಳು, ಸರಹದ್ದುಗಳ ಮಧ್ಯ
ಶುದ್ಧ ಗಾಳಿ, ಬೆಳಕು ನಿಶಿದ್ಧ ವಲಯದಲಿ
ಅರಳಲಾರದೇ, ಮುದುಡಿದ ಕೆಂಪು ತಾವರೆ
ಚೌಕಟ್ಟಿನಲಿ ಬಂಧಿತ
ಕಪ್ಪು ಬಿಳುಪಿನ ಭಾವಚಿತ್ರದಲ್ಲಿ
ಮೂಡಲಾರದು ವೈವಿಧ್ಯತೆಯ ಬಣ್ಣಗಳು,
ಆಯ್ಕೆಯಿಲ್ಲ, ಇಚ್ಛೆಯಿಲ್ಲ.
ಕತ್ತಲ ಗವಿಯಲ್ಲಿ ಬೇತಾಳ
ಕಿಟಕಿಯಾಚೆ ಪರದೆ ಸರಿಸಿ ಇಣುಕಿದರೆ,
ಶೂನ್ಯ ತುಂಬಿದ ಆಕಾಶದಲ್ಲಿ
ದುಃಖದ ಕಾರ್‍ಮೋಡ ಚೆಲ್ಲಾಡಿ
ಆದರೂ ರೆಕ್ಕೆ ಪುಕ್ಕ ಹಚ್ಚಿಕೊಂಡು ಆಕಾಶದಲ್ಲಿ
ಹೂರ್‌ಪರಿ’ಯಂತೆ ಹಾರುತ್ತೇನೆ.
ಬಂಧನದ ಸರಪಳಿ ಕಿತ್ತೆಸೆದು ಬೆಳ್ಳಕ್ಕಿ
ನಿರಾಂತಕ ಹಾರಾಡುತ್ತೇನೆ.
ನಾನು ಅನುಭವಿಸಿದ ಬಂಧನದ ನರಕಯಾತನೆ
ಕೆಲ ದಿನಗಳಾದರೂ ಅವನೂ ಅನುಭವಿಸಲಿ
ಆಗ ತಿಳಿಯುತ್ತದೆ ಅವನಿಗೆ
ಸ್ವಾತಂತ್ರ ಎಂದರೇನೆಂದು.
*****
(ಹೂ‌ರ್ ಪರಿ-ದೇವಕನ್ಯೆ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...