Home / ಕವನ / ಕೋಲಾಟ / ಗೊಲ್ಲರ ಹುಡುಗ

ಗೊಲ್ಲರ ಹುಡುಗ

ಚಿನ್ನದ ಗುದುರೆ ಗೊಲ್ಲರ ಹುಡುಗಾ ಕೋಲೆನ್ನ ಕೋಲೇ
ವಳೆ ಲಾಗಲೇ ಲೇನು ಮಾಡ್ಯಾನಾ || ೧ ||

ಅರಸೂನ ವನಗೆ ಲಾದರೆ ನಡುದ್ಯಾ
ವಳ್ಳೆಲಾಗಲೇ ಲೇನು ಮಾಡ್ಯನು || ೨ ||

ವಳ್ಳೆಲಾಗಲೇ ಅರಸಗೆಲಾದರ್‍ಯೇನು ಹೇಳುದು?
“ನಿಮ್ಮಲೆ ಮನುಗೆ ಸಾನಲೆ ಉಳುತೇ” || ೩ ||

ಅಂದಿ ಅರಸಗೆ ಲಾದರೆ ನುಡುದನು ಗೊಲ್ಲಾರ ಹುಡುಗಾ
ಚಿನ್ನದ ಗುದುರೆ ಗೊಲ್ಲಾರ ಹುಡುಗಾ || ೪ ||

ಲಾಗಲೆ ಲೇನು ಕೇಳ್ಯಾನು ಅರಸ?
ಮರಮನೆಲೆ ಯಾವ ಲಕ್ಕಿಲಾಸೋ || ೫ ||

ಯಲಗೊತ್ತುಲೆ ಕೇಳಿದ ಅರಸ
ಯಾವರೆ ಕೆಲಸಾ ಬೇಕಲ ಸ್ವಾಮಿ || ೬ ||

ಯಾವರೆ ಕೆಲಸಾ ಮಾಡಲು ಎಲ್ಲೇ
ಲಾಗಲೆ ಲೇನೂ ಮಾಡನೆ ಹುಡುಗಾ || ೭ ||

ಲಡುಗೆಲೆ ಮನೆಗೆ ಲಾದರೆನೋಡಿ
ಲಡುಗೆಲೇ ಲಾದರೆ ಮಾಡುಲಿಕೆ ಹಾಕ್ಯಾ || ೮ ||

ಗೊಲ್ಲರ ಹುಡುಗಾ ಯೇನಾರೆ ಮಾಡ್ಯಾ?
ಬೇಕಾದ ಲಡುಗೆ ಮಾಡಿರಿ ಇನ್ನೇ || ೯ ||

ತಾಸೀನ ಲೊಳಗೆ ಮಾಡುತ್ಯಾನು ಹುಡುಗಾ
ಒಳ್ಳೆ ಲಡಗೆ ಲೂಟಕಾದರೆ ಕರದಾ || ೧೦ ||

ಒಳ್ಳೆ ಅರಶಗೆ ಲಡುಗೇ ಮಾಡಿದ
ನಿತ್ಯದಂತೆ ದೇವರ ಪೂಜ್ಯೇ || ೧೧ ||

ಪೂಜೆನಲಾದರೆ ಮಾಡ್ಯಾನ ಲರಸ
ಊಟಕೆಲಾದರೆ ನಡೆದನು ಲರಸ || ೧೨ ||

ನಡೆದನೋ ಲರಸ ನೋಡಿರಿ ಶಿವನೆ
ಚಿನ್ನದ ಗುದುರೇ ಗೊಲ್ಲರ ಹುಡುಗಾ || ೧೩ ||

ಲರಸಗೆ ನೋಡಿ ಹೇಳ್ಯಾ ನೆಲಾದರೆ
ಬಟ್ಟಲದೊಳಗೆ ಹಾಕ್ಯಾನು ಲಿನ್ನೆ || ೧೪ ||

ಊಟದ ರುಚಿಯೇ ನೋಡ್ಯಾನು ಲರಸಾ
ಪಕವನಲಾದರೆ ಆಗಿದೊಶೀವನೆ || ೧೫ ||

ಊಟಕೆ ಆದರೆ ಬೆರಗ್ಯಾನೋ ಲರಸು
ಚಿನ್ನದ ಗುದುರೆ ಗೊಲ್ಲರ ಹುಡುಗಾ
ಬೇಕಾದ ಊಟ ಉಪಚಾರ ಮಾಡುತ್ಯಾ || ೧೬ ||
*****
ಹೇಳಿದವರು: ಢಾಕು ದೇವು ನಾಯ್ಕ, ಅರಗಾ ತಾಲೂಕು, ಕಾರವಾರ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...