Home / ಲೇಖನ / ವಿಜ್ಞಾನ / ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್‍ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡಿ ಇದೊಂದು ಮಾಂಸಾಹಾರಿಯೇ ಎಂದು ತಿರ್‍ಮಾನಿಸಲಾಗಿದೆ. ಮೊಟ್ಟೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಂದರೆ ಪ್ರತಿಶತ ೨೫೦ ಮಿ ಗ್ರಾಂನಿಂದ ೩೦೦ ಮಿ ಗ್ರಾಂ ನಷ್ಟು ಕೊಲಸ್ಟರಾಲ್ ಸಂಗ್ರಹವಿದೆ. ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ನಾರಿನಂಶ ಮೊಟ್ಟೆಯಲ್ಲಿ ಇಲ್ಲವೇ ಇಲ್ಲ. ಹಾಗೆಯೇ ಶಕ್ತಿಯ ಉತ್ಪಾದನೆಗೆ ಅಗತ್ಯವಾಗಿ ಬೇಕಾದ ಕಾರ್‍ಬೋಹೈಡ್ರೆಟ್ ಮೊಟ್ಟೆಯಲ್ಲಿ ಇಲ್ಲ. ನಿಸರ್‍ಗದಲ್ಲಿ ಮೊಟ್ಟೆ ತಿನ್ನುವ ಪ್ರಾಣಿ ಮಾನವನ್ನೊಬ್ಬನೇ ಎಂದು ವಿಜ್ಞಾನಿಗಳು ಹೇಳುತ್ತಾರೆ ಡಾ| ಇನ್ನಾ ಎಂಬ ಆಹಾರ ವಿಜ್ಞಾನಿಗಳ ಪ್ರಕಾರ ಮೊಟ್ಟೆ ವಿಷ ಆಹಾರವೆಂದು ಹೇಳಲಾಗುತ್ತದೆ. ಆದ್ದರಿಂದ ಸಸ್ಯಮೂಲದ ಪ್ರೋಟೀನ್, ವಿಟಮಿನ್, ಕಾರ್‍ಬೊಹೈಡ್ರೆಟ್, ನಾರಿನಂಶ, ಕೊಬ್ಬು ಪ್ರಕೃತಿಯಲ್ಲಿ ಸಾಕಷ್ಟು ಇರುವಾಗ ಆರೋಗ್ಯವನ್ನು ಹಾಳು ಮಾಡುವ ಮೊಟ್ಟೆಗಳನ್ನು ಸೇವಿಸುವುದು ಅಪಾಯವೆಂದು ಈ ವಿಜ್ಞಾನಿಗಳು ತಿಳಿಸುತ್ತಾರೆ. ಮೊಟ್ಟೆಯ ಹೊರಕವಚದಲ್ಲಿ ಸು. ೧೫ ರಿಂದ ೨೦ ಸಾವಿರ ಸೂಕ್ಷ್ಮರಂಧ್ರಗಳಿರುತ್ತವೆ. ಮೊಟ್ಟೆ ಮರಿಯಾಗಲು ಈ ಸೂಕ್ಷ್ಮ ರಂಧ್ರದ ಮೂಲಕ ಆಮ್ಲಜನಕ ಪೂರೈಕೆಯಾಗುತ್ತದೆ. ೨೪ ಗಂಟೆಗಳಿಗೂ ಅಧಿಕ ಕಾಲ ಮೊಟ್ಟೆಗಳನ್ನು ಶೇಖರಿಸಿಟ್ಟರೆ ಬ್ಯಾಕ್ಟೀರಿಯಾಗಳು ಮೊಟ್ಟೆಯ ಒಳಮೈ ಪ್ರವೇಶಿಸಿ ತಿನ್ನುವವರಿಗೆ ಕೂಡಲೇ ಅಪಾಯ ತರಬಹುದೆಂದು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...