Home / ಲೇಖನ / ವಿಜ್ಞಾನ / ಪ್ಲೋರೋ ಕಾರ್‍ಬನ್ ಹೊಸ ರಕ್ತ

ಪ್ಲೋರೋ ಕಾರ್‍ಬನ್ ಹೊಸ ರಕ್ತ

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ್ಸ್‌ನಂತ ಮಹಾರೋಗ ತಗುಲಬಹುದು ಮತ್ತು ದುಬಾರಿ ಬೆಲೆ ಕೊಟ್ಟು ಬಡವರಿಗೆ ಕೊಳ್ಳಲಾಗದಿರಬಹುದು. ಇಂಥಹ ಅಡ್ಡಪರಿಣಾಮಗಳನ್ನು ಹೋಗಲಾಡಿಸಲೆಂದೇ ವಿಜ್ಞಾವಿಗಳು ‘ಪ್ಲೋರೋ ಕಾರ್‍ಬನ್’ ನಿಂದ ರೋಗಿಗೆ ರಕ್ತವೃದ್ಧಿಯಾಗುವ ಸಂಶೋಧನೆಯನ್ನು ಮಾಡಿದ್ದಾರೆ. (ಇಲ್ಲಿ ರಕ್ತದ ವರ್‍ಗ ಸಹಿತ ಬದಲಾಗಬಹುದು)

ಅಮೇರಿಕಾದ ವಿಜ್ಞಾನಿಗಳಾದ ಡಾ|| ಪ್ರಾಂಕ್‌ಗೊರನ್ ಮತ್ತು ಡಾ|| ರೆಲ್ಯಾಂಡ್ ಕ್ಲಾರ್‍ಕ್‌ರು ಇದರ ಅದ್ಭುತ ಗುಣವನ್ನು ಬಯಲಿಗೆಳೆದರು. ಫ್ಲೂರೋ ಕಾರ್‍ಬನನ್ನು ದೇಹಕ್ಕೆ ಸೇರಿಸಿದರೆ ಅಡ್ಡಪರಿಣಾಮಗಳಾಗದೇ ಅದು ರಕ್ತವು ಎಷ್ಟು ಅಂಗಾರಾಮ್ಲ, ಆಮ್ಲಜನಕಗಳನ್ನು ಹೀರಿಕೊಳ್ಳುವುದೋ ಅದರ ೧೫ ಪಾಲಿನಷ್ಟು ಅಧಿಕವಾಗಿ ಹೀರಿಕೊಂಡು ರೋಗಿ ಸಾಯುವುದನ್ನು ತಪ್ಪಿಸಬಲ್ಲದು ಎಂದು ದೃಧೀಕರಿಸುತ್ತಾರೆ.

೧೯೭೨ ರಲ್ಲಿ ಅಮೇರಿಕಾದ ಡಾ || ವಿಲಿಯಂ ಕೋಸೆನ್‌ಬಾಂ ಅವರು ಇಲಿಗಳ ಮೇಲೆ ಅವುಗಳ ರಕ್ತದ ಪ್ರತಿಶತ ೭೫ ರಷ್ಟು ಪ್ರಮಾಣದಲ್ಲಿ ಫ್ಲೂರೋ ಕಾರ್‍ಬನನ್ನೂ ಪೂರೈಸಿ ನೋಡಿದರು. ಅದರಿಂದ ಇಲಿಗಳ ಮಿದುಳು ಮತ್ತು ಹೃದಯದ ಕ್ರಿಯೆಗಳಲ್ಲಿ ವ್ಯತ್ಯಾಸವುಂಟಾಗಲಿಲ್ಲ. ಬಹುಬೇಗನೆ ಫ್ಲೂರೋಕಾರ್ಬನ್ ಅಂಶ ದೇಹದಿಂದ ಮಾಯವಾಗಿ ರಕ್ತವು ಅಧಿಕಗೊಳ್ಳುತ್ತಿರುವುದು ಕಂಡು ಬಂದಿತು. ಇಲಿ ಮತ್ತು ನಾಯಿಗಳ ದೇಹಕ್ಕೆ ಫ್ಲೂರೋಕಾರ್‍ಬನನ್ನು ಪ್ರಯೋಗಿಸಿ ಅವು ದೀರ್‍ಘಕಾಲ ಏನೂ ತೊಂದರೆ ಇಲ್ಲದೇ ಬದುಕಿದ್ದನ್ನು ಮನಗಂಡರು.

ಹಾರ್ವರ್ಡ್‌ ವಿಶ್ವವಿದ್ಯಾಲಯರಲ್ಲಿ ೧,೫೦೦ ಕ್ಕಿಂತ ಹೆಚ್ಚುರ ರೀತಿ ಫ್ಲೂರೋ ಕಾರ್‍ಬನ ಮಾದರಿ ಚುಚ್ಚು ಮದ್ದುಗಳನ್ನು ತಯಾರಿಸಿ ಅಧ್ಯಯನ ಮಾಡುವ ಕಾರ್‍ಯ ಮುಂದುವರೆದಿದೆ. ಇದರಲ್ಲಿ ಯಾವ ಮಾದರಿಯ ಪ್ರಯೋಗದಿಂದ ಬಲುಬೇಗನೆ ತಾನಾಗಿ ರಕ್ತತುಂಬಿಗೊಳ್ಳುತ್ತದೆ ಎಂಬುದರ ಸೂಕ್ಷ್ಮ ಪರೀಕ್ಷೆಯೂ ನಡೆಯುತ್ತದೆ. ಈ ಶತಮಾನದ ಕೊನೆಗೆ ರಕ್ತಹಾನಿಯ ಅಗತ್ಯವಿಲ್ಲದೇ ನಿಜರಕ್ತವಿಲ್ಲದೇ ಹೊಸ ಮಾದರಿಯ ರಕ್ತ ಗಳಿಸುವ ಸಂಶೋಧನೆ ಬೆಳಕಿಗೆ ಬರುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...