Home / ಲೇಖನ / ವಿಜ್ಞಾನ / ಪ್ಲೋರೋ ಕಾರ್‍ಬನ್ ಹೊಸ ರಕ್ತ

ಪ್ಲೋರೋ ಕಾರ್‍ಬನ್ ಹೊಸ ರಕ್ತ

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ್ಸ್‌ನಂತ ಮಹಾರೋಗ ತಗುಲಬಹುದು ಮತ್ತು ದುಬಾರಿ ಬೆಲೆ ಕೊಟ್ಟು ಬಡವರಿಗೆ ಕೊಳ್ಳಲಾಗದಿರಬಹುದು. ಇಂಥಹ ಅಡ್ಡಪರಿಣಾಮಗಳನ್ನು ಹೋಗಲಾಡಿಸಲೆಂದೇ ವಿಜ್ಞಾವಿಗಳು ‘ಪ್ಲೋರೋ ಕಾರ್‍ಬನ್’ ನಿಂದ ರೋಗಿಗೆ ರಕ್ತವೃದ್ಧಿಯಾಗುವ ಸಂಶೋಧನೆಯನ್ನು ಮಾಡಿದ್ದಾರೆ. (ಇಲ್ಲಿ ರಕ್ತದ ವರ್‍ಗ ಸಹಿತ ಬದಲಾಗಬಹುದು)

ಅಮೇರಿಕಾದ ವಿಜ್ಞಾನಿಗಳಾದ ಡಾ|| ಪ್ರಾಂಕ್‌ಗೊರನ್ ಮತ್ತು ಡಾ|| ರೆಲ್ಯಾಂಡ್ ಕ್ಲಾರ್‍ಕ್‌ರು ಇದರ ಅದ್ಭುತ ಗುಣವನ್ನು ಬಯಲಿಗೆಳೆದರು. ಫ್ಲೂರೋ ಕಾರ್‍ಬನನ್ನು ದೇಹಕ್ಕೆ ಸೇರಿಸಿದರೆ ಅಡ್ಡಪರಿಣಾಮಗಳಾಗದೇ ಅದು ರಕ್ತವು ಎಷ್ಟು ಅಂಗಾರಾಮ್ಲ, ಆಮ್ಲಜನಕಗಳನ್ನು ಹೀರಿಕೊಳ್ಳುವುದೋ ಅದರ ೧೫ ಪಾಲಿನಷ್ಟು ಅಧಿಕವಾಗಿ ಹೀರಿಕೊಂಡು ರೋಗಿ ಸಾಯುವುದನ್ನು ತಪ್ಪಿಸಬಲ್ಲದು ಎಂದು ದೃಧೀಕರಿಸುತ್ತಾರೆ.

೧೯೭೨ ರಲ್ಲಿ ಅಮೇರಿಕಾದ ಡಾ || ವಿಲಿಯಂ ಕೋಸೆನ್‌ಬಾಂ ಅವರು ಇಲಿಗಳ ಮೇಲೆ ಅವುಗಳ ರಕ್ತದ ಪ್ರತಿಶತ ೭೫ ರಷ್ಟು ಪ್ರಮಾಣದಲ್ಲಿ ಫ್ಲೂರೋ ಕಾರ್‍ಬನನ್ನೂ ಪೂರೈಸಿ ನೋಡಿದರು. ಅದರಿಂದ ಇಲಿಗಳ ಮಿದುಳು ಮತ್ತು ಹೃದಯದ ಕ್ರಿಯೆಗಳಲ್ಲಿ ವ್ಯತ್ಯಾಸವುಂಟಾಗಲಿಲ್ಲ. ಬಹುಬೇಗನೆ ಫ್ಲೂರೋಕಾರ್ಬನ್ ಅಂಶ ದೇಹದಿಂದ ಮಾಯವಾಗಿ ರಕ್ತವು ಅಧಿಕಗೊಳ್ಳುತ್ತಿರುವುದು ಕಂಡು ಬಂದಿತು. ಇಲಿ ಮತ್ತು ನಾಯಿಗಳ ದೇಹಕ್ಕೆ ಫ್ಲೂರೋಕಾರ್‍ಬನನ್ನು ಪ್ರಯೋಗಿಸಿ ಅವು ದೀರ್‍ಘಕಾಲ ಏನೂ ತೊಂದರೆ ಇಲ್ಲದೇ ಬದುಕಿದ್ದನ್ನು ಮನಗಂಡರು.

ಹಾರ್ವರ್ಡ್‌ ವಿಶ್ವವಿದ್ಯಾಲಯರಲ್ಲಿ ೧,೫೦೦ ಕ್ಕಿಂತ ಹೆಚ್ಚುರ ರೀತಿ ಫ್ಲೂರೋ ಕಾರ್‍ಬನ ಮಾದರಿ ಚುಚ್ಚು ಮದ್ದುಗಳನ್ನು ತಯಾರಿಸಿ ಅಧ್ಯಯನ ಮಾಡುವ ಕಾರ್‍ಯ ಮುಂದುವರೆದಿದೆ. ಇದರಲ್ಲಿ ಯಾವ ಮಾದರಿಯ ಪ್ರಯೋಗದಿಂದ ಬಲುಬೇಗನೆ ತಾನಾಗಿ ರಕ್ತತುಂಬಿಗೊಳ್ಳುತ್ತದೆ ಎಂಬುದರ ಸೂಕ್ಷ್ಮ ಪರೀಕ್ಷೆಯೂ ನಡೆಯುತ್ತದೆ. ಈ ಶತಮಾನದ ಕೊನೆಗೆ ರಕ್ತಹಾನಿಯ ಅಗತ್ಯವಿಲ್ಲದೇ ನಿಜರಕ್ತವಿಲ್ಲದೇ ಹೊಸ ಮಾದರಿಯ ರಕ್ತ ಗಳಿಸುವ ಸಂಶೋಧನೆ ಬೆಳಕಿಗೆ ಬರುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...