Home / ಲೇಖನ / ವಿಜ್ಞಾನ / ರಕ್ತದ ಚಲನೆ ಮತ್ತು ಹೃದಯದ ಬಡಿತ

ರಕ್ತದ ಚಲನೆ ಮತ್ತು ಹೃದಯದ ಬಡಿತ

ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್ (೨೦೦ ರಿಂದ ೧೨೦೦ ಜಾನ್ಸ್)ವರೆಗೂ ಏರುಪೇರಾಗಬಹುದು. ಸರಾಸರಿ ಒಂದು ನಿಮಿಷದಲ್ಲಾಗುವ ೭೦ ಬಡಿತದಲ್ಲಿ ಸು ೫೦೦೦ ಗ್ರಾಂ. ೧೫ ಕೆ.ಜಿ.) ಆಗುತ್ತದೆ. ಇದೇ ಲೆಕ್ಕದಲ್ಲಿ ಮುಂದುವರಿದು ನೋಡಿದಾಗ ಒಂದು ವರ್ಷದಲ್ಲಿ ಸು. ೬ ಲಕ್ಷ ೮೦ ಸಾವಿರ ಗ್ರ್ಯಾಮ್ ಅಥವಾ ೩೧ ಲಕ್ಷ ಲೀಟರ್ ನಷ್ಟು ರಕ್ತ ಪಂಪ್ ಆಗಿರುವುದನ್ನು ಕಂಡು ಯಾರೊಬ್ಬರಿಗೂ ಈ ಅದ್ಭುತ ಪಂಪ್ ಬಗ್ಗೆ ಅಶ್ಚರ್‍ಯ ಅನ್ನಿಸದೇ ಇರಲಾರರು. ರಕ್ತ ಹೃದಯದಿಂದ ಕಾಲಿನವರೆಗೆ ಒಂದು ನಿಮಿಷಕ್ಕೂ ಕಡಿಮೆ ಅವಧಿಯಲ್ಲಿಯೇ ಬರುತ್ತದೆ. ಈ ಅಂಶವನ್ನು ಮೊದಲಿಗೆ ಹೊರಗೆಡವಿದ್ದವರು ವಿಲಿಯಂ ಹಾರ್‍ವೆ (೧೫೭೮-೧೬೭೫) ಆದರೆ ಇವನು ಹೃದಯದ ಬಡಿತದ ಬಗೆಗೆ ತಿಳಿಯಲಾಗದೇ ಹತಾಶನಾಗಿದ್ದ. ರಕ್ತ ಹೃದಯದಿಂದ ತದೇಕವಾಗಿ ಪಂಪ್ ಆಗಿದ್ದರೆ ದೇಹದ ಯಾವುದೇ ಜೀವಕೋಶಗಳನ್ನು ಜೀವಂತವಾಗಿಯೂ ಚುರುಕಾಗಿಯೂ ಇಡಲು ಸಾಧ್ಯವಿಲ್ಲ ಜೀವಕೋಶಗಳ ಉಳುವಿಗೆ ಬೇಕಾದ ಆಮ್ಲಜನಕ ಈ ರಕ್ತದಿಂದ ಒದಗುತ್ತಿರುತ್ತದೆ. ಆಮ್ಲಜನಕ ರಕ್ತ ದೇಹದ ಎಲ್ಲ ಜೀವಕೋಶಗಳಿಗೂ ತಲುಪಿ ಅಲ್ಲಿಂದ ಆಮ್ಲ ಜನಕಕಳೆದುಕೊಂಡ ರಕ್ತಹೃದಯದ ಮೇಲ್ಬಾಗದ ಬಲ ಕವಾಟಿಗೆ ಬರುತ್ತದೆ. ಈ ಭಾಗಕ್ಕೆ ಬಂದ ರಕ್ತ ಬಲ ಶ್ವಾಸಕೋಶಕ್ಕೆ ಪಂಪ್ ಆಗುತ್ತದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...