Home / ಲೇಖನ / ಇತರೆ / ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು.

ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ…. ತಿರುಮಲ ಮಂದಿರದ ಪ್ರವೇಶ ಬಾಗಿಲಲ್ಲೇ ಶ್ರೀಕೃಷ್ಣ ದೇವರಾಯ ಭಯಭಕ್ತಿಲಿ ಕರ ಮುಗಿದು ಶೋಭಾಯನಮಾನವಾಗಿ ನಿಂತು ನಮ್ಮನ್ನೆಲ್ಲ ಸ್ವಾಗತಿಸುತ್ತಿರುವ ಪರಿಗೆ ತನ್ನ ಎಡ ಮತ್ತು ಬಲಭಾಗದಲ್ಲಿ ಧರ್‍ಮಪತ್ನಿಯರೂ ಕೂಡಾ ಕರ ಮುಗಿದು ಪ್ರಸನ್ನವದನರಾಗಿ ನಿಂತಿರುವ ಭಂಗಿಗೆ ಬೆರಗಾದೆ.

ವಿಜಯನಗರ ನಿರ್‍ಮಾಣ ತೇಜ ಕನ್ನಡ ರಾಜ್ಯ ರಮಾರಮಣನೆಂದೇ ಖ್ಯಾತಿ ಪ್ರಖ್ಯಾತಿ ಪಡೆದಿದ್ದ ಶ್ರೀಕೃಷ್ಣದೇವರಾಯನ ಕಾಲದಲ್ಲಿ ಮುತ್ತುರತ್ನ ವಜ್ರವೈಡೂರ್‍ಯಗಳನ್ನು ರಾಶಿರಾಶಿ ಹಾದಿಬೀದಿಯಲ್ಲಿ ಬಳ್ಳದಿಂದ ಅಳೆದು ಮಾರಿದ ಕಾಲದಲ್ಲಿದ್ದನೆಂಬುದಕ್ಕಿಂತ ಈಗ ಹೇಗೆ ಅಲ್ಲಿ ನಿಂತಿದ್ದಾನೆ. ಅಲ್ಲಿಯು ಸಲ್ಲಿದವ ಇಲ್ಲಿಯೂ ಹೇಗೆ ಸಲ್ಲುತ್ತಿರುವವನೆಂಬುದಿಲ್ಲಿ ಬಹಳ ಮುಖ್ಯವಾಗುವುದು!

ಶ್ರೀಕೃಷ್ಣದೇವರಾಯನಿಲ್ಲಿ ಜೀವಂತವಿದ್ದಾನೆ ಅನಿಸುವುದು, ಬಾಳಿ ಬದುಕಿ ಸತ್ತಿಲ್ಲ. ಸತ್ತು ಇಲ್ಲಿ ಬದುಕಿದ್ದಾನೆ ಎಂದು ನಮ್ಮ ಕಣ್ಣಿದುರಿಗೆ ಮೆರವಣಿಗೆ ಹೊರಡುವನು. ಇದಕ್ಕಿಂತ ಭಾಗ್ಯ ಇನ್ನಿಲ್ಲವೆನಿಸುವುದು.

ಶ್ರೀಕೃಷ್ಣದೇವರಾಯ ತಿರುಪತಿ ತಿಮ್ಮಪ್ಪನ ಪರಮ ಆರಾಧಕನಾಗಿದ್ದನಲ್ಲದೆ, ಇಬ್ಬರು ಸತಿಯರೊಂದಿಗೆ ಪ್ರತಿ ತಿಂಗಳಿಗೊಮ್ಮೆ ಬಂದು ಅಮೂಲ್ಯವಾದ ಪಚ್ಚೆ ಮುತ್ತು ರತ್ನ, ವಜ್ರ, ವೈಡೂರ್‍ಯ, ಚಿನ್ನವನ್ನರ್‍ಪಿಸಿ ತೆರಳಿದ್ದಕ್ಕೆ ಇಲ್ಲಿ ದಾಖಲೆಗಳಿವೆ! ಬರೀ ಚಿನ್ನದಿಂದ ನಿರ್‍ಮಿಸಿಕೊಟ್ಟ ಆನಂದ ನಿಲಯಂ ಕೂಡಾ ಇವರ ಕೊಡುಗೆಯಾಗಿದೆ.

– ಹೀಗೆ ಶ್ರೀಕೃಷ್ಣದೇವರಾಯ ಹಾಗೂ ಇಬ್ಬರು ಧರ್‍ಮಪತ್ನಿಯರೂ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇಂದಿಗೂ ಜೀವಂತಿರುವರು. ಎಲ್ಲರ ಮನೆ ಮನಗಳಲ್ಲಿ ನೆಲೆ ನಿಂತಿರುವರು, ಜೀವನವೆಂದರೆ… ಇದಕ್ಕಿಂತ ಹೆಚ್ಚಿನದು ಇರುವುದಿಲ್ಲವಲ್ಲವೇ??
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...