Home / ಲೇಖನ / ಇತರೆ / ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು.

ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ…. ತಿರುಮಲ ಮಂದಿರದ ಪ್ರವೇಶ ಬಾಗಿಲಲ್ಲೇ ಶ್ರೀಕೃಷ್ಣ ದೇವರಾಯ ಭಯಭಕ್ತಿಲಿ ಕರ ಮುಗಿದು ಶೋಭಾಯನಮಾನವಾಗಿ ನಿಂತು ನಮ್ಮನ್ನೆಲ್ಲ ಸ್ವಾಗತಿಸುತ್ತಿರುವ ಪರಿಗೆ ತನ್ನ ಎಡ ಮತ್ತು ಬಲಭಾಗದಲ್ಲಿ ಧರ್‍ಮಪತ್ನಿಯರೂ ಕೂಡಾ ಕರ ಮುಗಿದು ಪ್ರಸನ್ನವದನರಾಗಿ ನಿಂತಿರುವ ಭಂಗಿಗೆ ಬೆರಗಾದೆ.

ವಿಜಯನಗರ ನಿರ್‍ಮಾಣ ತೇಜ ಕನ್ನಡ ರಾಜ್ಯ ರಮಾರಮಣನೆಂದೇ ಖ್ಯಾತಿ ಪ್ರಖ್ಯಾತಿ ಪಡೆದಿದ್ದ ಶ್ರೀಕೃಷ್ಣದೇವರಾಯನ ಕಾಲದಲ್ಲಿ ಮುತ್ತುರತ್ನ ವಜ್ರವೈಡೂರ್‍ಯಗಳನ್ನು ರಾಶಿರಾಶಿ ಹಾದಿಬೀದಿಯಲ್ಲಿ ಬಳ್ಳದಿಂದ ಅಳೆದು ಮಾರಿದ ಕಾಲದಲ್ಲಿದ್ದನೆಂಬುದಕ್ಕಿಂತ ಈಗ ಹೇಗೆ ಅಲ್ಲಿ ನಿಂತಿದ್ದಾನೆ. ಅಲ್ಲಿಯು ಸಲ್ಲಿದವ ಇಲ್ಲಿಯೂ ಹೇಗೆ ಸಲ್ಲುತ್ತಿರುವವನೆಂಬುದಿಲ್ಲಿ ಬಹಳ ಮುಖ್ಯವಾಗುವುದು!

ಶ್ರೀಕೃಷ್ಣದೇವರಾಯನಿಲ್ಲಿ ಜೀವಂತವಿದ್ದಾನೆ ಅನಿಸುವುದು, ಬಾಳಿ ಬದುಕಿ ಸತ್ತಿಲ್ಲ. ಸತ್ತು ಇಲ್ಲಿ ಬದುಕಿದ್ದಾನೆ ಎಂದು ನಮ್ಮ ಕಣ್ಣಿದುರಿಗೆ ಮೆರವಣಿಗೆ ಹೊರಡುವನು. ಇದಕ್ಕಿಂತ ಭಾಗ್ಯ ಇನ್ನಿಲ್ಲವೆನಿಸುವುದು.

ಶ್ರೀಕೃಷ್ಣದೇವರಾಯ ತಿರುಪತಿ ತಿಮ್ಮಪ್ಪನ ಪರಮ ಆರಾಧಕನಾಗಿದ್ದನಲ್ಲದೆ, ಇಬ್ಬರು ಸತಿಯರೊಂದಿಗೆ ಪ್ರತಿ ತಿಂಗಳಿಗೊಮ್ಮೆ ಬಂದು ಅಮೂಲ್ಯವಾದ ಪಚ್ಚೆ ಮುತ್ತು ರತ್ನ, ವಜ್ರ, ವೈಡೂರ್‍ಯ, ಚಿನ್ನವನ್ನರ್‍ಪಿಸಿ ತೆರಳಿದ್ದಕ್ಕೆ ಇಲ್ಲಿ ದಾಖಲೆಗಳಿವೆ! ಬರೀ ಚಿನ್ನದಿಂದ ನಿರ್‍ಮಿಸಿಕೊಟ್ಟ ಆನಂದ ನಿಲಯಂ ಕೂಡಾ ಇವರ ಕೊಡುಗೆಯಾಗಿದೆ.

– ಹೀಗೆ ಶ್ರೀಕೃಷ್ಣದೇವರಾಯ ಹಾಗೂ ಇಬ್ಬರು ಧರ್‍ಮಪತ್ನಿಯರೂ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇಂದಿಗೂ ಜೀವಂತಿರುವರು. ಎಲ್ಲರ ಮನೆ ಮನಗಳಲ್ಲಿ ನೆಲೆ ನಿಂತಿರುವರು, ಜೀವನವೆಂದರೆ… ಇದಕ್ಕಿಂತ ಹೆಚ್ಚಿನದು ಇರುವುದಿಲ್ಲವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...