Home / ಲೇಖನ / ಇತರೆ / ಅಸ್ಥಿಪಂಜರಗಳ ಕತೆ

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು.

ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧೫ರಲ್ಲಿ ಹೇಳುತ್ತಿವೆ.

ಈ ೯೭ ಅಸ್ಥಿಪಂಜರಗಳು ಸುಮಾರು ಐದು ಸಾವಿರ ವರ್‍ಷಗಳಷ್ಟು ಹಳೆಯದಾದ ಸಣ್ಣ ಮನೆಯೊಂದರಲ್ಲಿದ್ದವುಗಳನ್ನು ಪುರಾತತ್ವ ಶಾಸ್ತ್ರಜ್ಞರು ಎಲ್ಲವನ್ನು ಹೊರಗೆಳೆದಿರುವರು.

ಇವೆಲ್ಲ ಭಾರಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರನ್ನು ಈಶಾನ್ಯ ಚೀನಾದ ಸಣ್ಣ ಮನೆಯಲ್ಲಿ ಒಟ್ಟಿಗೆ ಮಲಗಿಸಿ ಸುಡುತ್ತಿದ್ದರು. ಅದು ಉಳಿದವರಿಗೆ ಹರಡದಿರಲೆಂದು ಬಾಗಿಲು, ಕಿಟಕಿ, ಗವಾಕ್ಷಿ ಏನೆಲ್ಲ ಮುಚ್ಚಿ ಜಾಗ್ರತೆ ಮಾಡುತ್ತಿದ್ದರೆಂದು ಪುರಾತತ್ವ ಶಾಸ್ತ್ರಜ್ಞರು ವಿವರಿಸಿರುವರು.

ಈ ರೀತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರಲ್ಲಿ ಹದಿಹರೆಯದವರು ಯುವಕರು-ಮಧ್ಯ ವಯಸ್ಕರು ಬಾಲಕರು ಎಲ್ಲ ರೀತಿಯ ವಯಸ್ಕರು ಇರುತ್ತಿದ್ದರೆಂದು ಅಸ್ಥಿಪಂಜರ ತಲೆಬುರುಡೆ ಇತ್ಯಾದಿಗಳನ್ನು ತೋರಿಸಿ ಅಲ್ಲಿದ್ದವರಿಗೆಲ್ಲ ವಿವರಿಸುತ್ತಿದ್ದರು.

ಈಶಾನ್ಯ ಚೀನಾದ ಈ ಭಾಗದಲ್ಲಿ ಲಿಪಿ ಇಲ್ಲದಾಗ ಇಲ್ಲಿನ ಜನರೆಲ್ಲ ಗುಂಪುಗುಂಪಾಗಿ ಸಣ್ಣ ಸಣ್ಣ ಮನೆಗಳಲ್ಲಿ ನೆಲೆಸಿದ್ದರೆಂಬುದನ್ನು ಸಂಶೋಧನೆಗಳು ಹೊರಗೆಡವಿಯಲ್ಲದೆ, ಆಹಾರಕ್ಕಾಗಿ ಮುಖ್ಯವಾಗಿ ಬೇಟೆಯಾಡುತ್ತಿದ್ದರೆಂಬುದನ್ನು ತಜ್ಞರು ಸಂಶೋಧಿಸಿರುವರು.

– ಹೀಗೆ ಸಂಶೋಧನೆಗಳು ತೀವ್ರಗೊಳ್ಳುತ್ತಾ ಹೋದಂತೆಲ್ಲ ಏನೆಲ್ಲ ರಹಸ್ಯಗಳು ಹೊಸ ಹೊಸ ಆವಿಷ್ಕಾರಗಳು ಹೊರಗೆ ಬೀಳಬಹುದೆಂದು ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...