Home / ಲೇಖನ / ಇತರೆ / ಮ್ಯಾನ್ ಬುಕರ್

ಮ್ಯಾನ್ ಬುಕರ್

೨೦೧೫ರ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿ ಹೊರಬಿದ್ದಿದೆ. ಜಾಗತಿಕ ಮಟ್ಟದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಉತ್ತಮ ಕಾದಂಬರಿಗೆ ಈ ನಗದು ಸಾಹಿತ್ಯ ಪುರಸ್ಕಾರ ಲಭಿಸುವುದು.

ಈ ನಗದು ಪ್ರಶಸ್ತಿಯನ್ನು ಮೊತ್ತಮೊದಲ ಬಾರಿಗೆ ೧೯೬೯ರಿಂದಲೂ ಕೊಡಮಾಡುತ್ತಾ ಬಂದಿದೆಯೆಂದು ಲಂಡನ್‌ನಿಂದ ವರದಿಯಾಗಿರುವುದು.

ಭವ್ಯ ಭಾರತದ ಲೇಖಕಿ ಅನುರಾಧಾರಾಯ್‌ ಸೇರಿದಂತೆ ಒಟ್ಟು ೧೩ ಮಂದಿ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿಯಲ್ಲಿ ಈಗಾಗಲೇ ಸ್ಥಾನಮಾನ ಪಡೆದಿರುವರು! ಈ ಪ್ರಶಸ್ತಿ ಪಟ್ಟಿಯಲ್ಲಿ ಹೆಸರು ಸೇರ್‍ಪಡೆಗೊಳ್ಳುವುದೂ ಒಂದು ಹೆಮ್ಮೆಯ ಸಾಧನೆಯೆಂದೇ ಪರಿಗಣಿಸಲ್ಪಡುವರು.

ಅನುರಾಧಾ ರಾಯ್ ಅವರ- “ಸ್ಲೀ ಪಿಂಗ್ ಅನ್ ಜುಪಿಟರ್” ಕೃತಿ ಈ ಪ್ರಶಸ್ತಿಯ ಆಯ್ಕೆ ಪಟ್ಟಿಯಲ್ಲಿದ್ದಾರೆ!

ಈ ಪ್ರಶಸ್ತಿ ಪಟ್ಟಿಯಲ್ಲಿನ ೧೩ ಕೃತಿಗಳಲ್ಲಿ ಬ್ರಿಟನ್ ಲೇಖಕ ಟೊಮ್ ಮ್ಯಾಕ್‌ಕರ್‍ತಿ ಅವರ ‘ಸವೈ ಐಸ್ಲಾಂಡ್, ಆಂಡ್ರೂ ಒ ಹಗನ್ ಅವರ- ದಿ ಇಲ್ಯುಮಿನೇಷನ್, ಭಾರತ ಮೂಲದ ಲೇಖಕ ಸಂಜೀವ್‌ಸಹೊತ ಅವರ ‘ದಿ ಇಯರ್ ಆಫ್ ದಿ ರನ್‌ ವೇಸ್’ ಒಳಗೊಂಡಿವೆ.

ಐವರು ಸದಸ್ಯರನ್ನೊಳಗೊಂಡ ತೀರ್‍ಪುಗಾರರು ಈಗಾಗಲೇ ಒಟ್ಟು ೧೫೬ ಕೃತಿಗಳಲ್ಲಿ ೧೩ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದರಲ್ಲಿ ಆಯ್ದ ಆರು ಕೃತಿಗಳ ಅಂತಿಮ ಪಟ್ಟಿಯನ್ನು ೨೦೧೫ರ ಸೆಪ್ಟೆಂಬರ್‌ನಲ್ಲಿ ಪ್ರಕಟಿಸುವರು.

೨೦೧೫ರ ಅಕ್ಟೋಬರ್ ೧೩ರಂದು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮವಾಗಿ ಘೋಷಿಸುವರು.

ಇದು ೨೦೧೫ರ ಮ್ಯಾನ್‌ಬುಕರ್ ಪ್ರಶಸ್ತಿಯ ರೂಪರೇಷೆಯಾಗಿದ್ದು ಭವ್ಯ ಭಾರತದ ಅನುರಾಧಾ ರಾಯ್ ಅವರಿಗೆ ಈ ಸಾರಿಯ ಪ್ರಶಸ್ತಿಯು ಲಭಿಸಲೆಂದು ನಾವು ನೀವು ಶುಭ ಕೋರೋಣವಲ್ಲವೇ?

ನನ್ನ ಮುದ್ದು ಪುಟಾಣಿಗಳೆ… ನೀವೆಲ್ಲ ಇಂದಿನಿಂದಲೇ ಮನಸ್ಸು ಮಾಡಿ! ನಾನೂ ಇಂಗ್ಲೀಷ್ ಸಾಹಿತ್ಯ ಅಭ್ಯಾಸ ಮಾಡಿ ಇಂಗ್ಲೀಷ್‌ನಲ್ಲಿ ಸಾಧನೆ ಮಾಡಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತೇನೆಂಬ ಗುರಿ, ಹಠ, ಸಾಧನೆ ಹೊಂದುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...