Home / ಲೇಖನ / ಇತರೆ / ಮ್ಯಾನ್ ಬುಕರ್

ಮ್ಯಾನ್ ಬುಕರ್

೨೦೧೫ರ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿ ಹೊರಬಿದ್ದಿದೆ. ಜಾಗತಿಕ ಮಟ್ಟದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಉತ್ತಮ ಕಾದಂಬರಿಗೆ ಈ ನಗದು ಸಾಹಿತ್ಯ ಪುರಸ್ಕಾರ ಲಭಿಸುವುದು.

ಈ ನಗದು ಪ್ರಶಸ್ತಿಯನ್ನು ಮೊತ್ತಮೊದಲ ಬಾರಿಗೆ ೧೯೬೯ರಿಂದಲೂ ಕೊಡಮಾಡುತ್ತಾ ಬಂದಿದೆಯೆಂದು ಲಂಡನ್‌ನಿಂದ ವರದಿಯಾಗಿರುವುದು.

ಭವ್ಯ ಭಾರತದ ಲೇಖಕಿ ಅನುರಾಧಾರಾಯ್‌ ಸೇರಿದಂತೆ ಒಟ್ಟು ೧೩ ಮಂದಿ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿಯಲ್ಲಿ ಈಗಾಗಲೇ ಸ್ಥಾನಮಾನ ಪಡೆದಿರುವರು! ಈ ಪ್ರಶಸ್ತಿ ಪಟ್ಟಿಯಲ್ಲಿ ಹೆಸರು ಸೇರ್‍ಪಡೆಗೊಳ್ಳುವುದೂ ಒಂದು ಹೆಮ್ಮೆಯ ಸಾಧನೆಯೆಂದೇ ಪರಿಗಣಿಸಲ್ಪಡುವರು.

ಅನುರಾಧಾ ರಾಯ್ ಅವರ- “ಸ್ಲೀ ಪಿಂಗ್ ಅನ್ ಜುಪಿಟರ್” ಕೃತಿ ಈ ಪ್ರಶಸ್ತಿಯ ಆಯ್ಕೆ ಪಟ್ಟಿಯಲ್ಲಿದ್ದಾರೆ!

ಈ ಪ್ರಶಸ್ತಿ ಪಟ್ಟಿಯಲ್ಲಿನ ೧೩ ಕೃತಿಗಳಲ್ಲಿ ಬ್ರಿಟನ್ ಲೇಖಕ ಟೊಮ್ ಮ್ಯಾಕ್‌ಕರ್‍ತಿ ಅವರ ‘ಸವೈ ಐಸ್ಲಾಂಡ್, ಆಂಡ್ರೂ ಒ ಹಗನ್ ಅವರ- ದಿ ಇಲ್ಯುಮಿನೇಷನ್, ಭಾರತ ಮೂಲದ ಲೇಖಕ ಸಂಜೀವ್‌ಸಹೊತ ಅವರ ‘ದಿ ಇಯರ್ ಆಫ್ ದಿ ರನ್‌ ವೇಸ್’ ಒಳಗೊಂಡಿವೆ.

ಐವರು ಸದಸ್ಯರನ್ನೊಳಗೊಂಡ ತೀರ್‍ಪುಗಾರರು ಈಗಾಗಲೇ ಒಟ್ಟು ೧೫೬ ಕೃತಿಗಳಲ್ಲಿ ೧೩ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದರಲ್ಲಿ ಆಯ್ದ ಆರು ಕೃತಿಗಳ ಅಂತಿಮ ಪಟ್ಟಿಯನ್ನು ೨೦೧೫ರ ಸೆಪ್ಟೆಂಬರ್‌ನಲ್ಲಿ ಪ್ರಕಟಿಸುವರು.

೨೦೧೫ರ ಅಕ್ಟೋಬರ್ ೧೩ರಂದು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮವಾಗಿ ಘೋಷಿಸುವರು.

ಇದು ೨೦೧೫ರ ಮ್ಯಾನ್‌ಬುಕರ್ ಪ್ರಶಸ್ತಿಯ ರೂಪರೇಷೆಯಾಗಿದ್ದು ಭವ್ಯ ಭಾರತದ ಅನುರಾಧಾ ರಾಯ್ ಅವರಿಗೆ ಈ ಸಾರಿಯ ಪ್ರಶಸ್ತಿಯು ಲಭಿಸಲೆಂದು ನಾವು ನೀವು ಶುಭ ಕೋರೋಣವಲ್ಲವೇ?

ನನ್ನ ಮುದ್ದು ಪುಟಾಣಿಗಳೆ… ನೀವೆಲ್ಲ ಇಂದಿನಿಂದಲೇ ಮನಸ್ಸು ಮಾಡಿ! ನಾನೂ ಇಂಗ್ಲೀಷ್ ಸಾಹಿತ್ಯ ಅಭ್ಯಾಸ ಮಾಡಿ ಇಂಗ್ಲೀಷ್‌ನಲ್ಲಿ ಸಾಧನೆ ಮಾಡಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತೇನೆಂಬ ಗುರಿ, ಹಠ, ಸಾಧನೆ ಹೊಂದುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...