Home / ಲೇಖನ / ಇತರೆ / ಹೀಗಾದರೆ ಮುಂದಿನ ಗತಿ?

ಹೀಗಾದರೆ ಮುಂದಿನ ಗತಿ?

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಹೆಂಡತಿಗಿಂತಲೂ ಅಧಿಕವಾಗಿ ಪ್ರೀತಿಸುವರಿದ್ದಾರೆ.”

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಮಗು ಅಷ್ಟೇ ಏಕೆ ಪತಿರಾಯನಿಗಿಂತಲೂ ಹೆಚ್ಚು ಕಾಳಜಿ ಮಾಡುವ ಪ್ರೀತಿಸುವವರಿದ್ದಾರೆ.”

“ನನ್ನ ಆಪ್ತ ಸ್ನೇಹಿತರಿಗಿಂತಲೂ ಅಧಿಕವೆಂದು ನಾನು ಸ್ಮಾರ್‍ಟ್ ಫೋನನ್ನು ನಂಬಿದ್ದೇನೆ”- ಹೀಗಾದರೆ ಮುಂದಿನ ಗತಿ? ಬರುಬರುತ್ತಾ ಮಾನವೀಯ ಸಂಬಂಧಗಳ ಗತಿ ಏನು? ನಾವೆತ್ತ ಸಾಗಿದ್ದೇವೆ??

ಇತ್ತೀಚೆಗೆ ಜಾಗತಿಕ ಸಾರ್‍ವಜನಿಕ ಅಭಿಪ್ರಾಯ ಸಂಶೋಧನಾ ಸಲಹಾ ಸಮಿತಿ ಅಂತರ್‍ಜಾಲದ ಮೂಲಕ ಈ ಸಮೀಕ್ಷೆ ಕೈಗೊಂಡಿತ್ತು! ಆಗಸ್ಟ್ ೨೦೧೫ರಲ್ಲಿ ಮೊಟೊರೊಲಾ ಕಂಪನಿ ನಡೆಸಿದ ಈ ಸಮೀಕ್ಷೆಯಲ್ಲಿ ಸುಮಾರು ಏಳು ಸಾವಿರ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಮಗ್ರ ಅಧ್ಯಯನವೊಂದನ್ನು ಸಿದ್ಧಗೊಳಿಸಿದೆ.

ಅದರ ಪ್ರಕಾರ ಭಾರತೀಯರು ಅನೇಕರು ಸ್ಮಾರ್‍ಟ್‌ಫೋನಿನಲ್ಲೇ ಮಗ್ನರಾಗುತ್ತಿದ್ದಾರೆನ್ನುವ ವಿಚಾರ ಒಂದೆಡೆಯಾದರೆ ಮತ್ತೊಂದೆಡೆ ಅದು ಕೆಲವರ ಹಾಸಿಗೆಯ ಸಂಗಾತಿಯೆಂದು ಹೇಳಿಕೊಂಡಿದ್ದಾರೆ!

ಹೌದು! ಇದು ತುಸು ಅತಿರೇಕವೆನಿಸಿದರೂ ನಿಜದ ಸಂಗತಿ ಎನ್ನುತ್ತಿದೆ ಇತ್ತೀಚೆಗೆ ಬಿಡುಗಡೆಯಾದ ಸೆವೆನ್ ಕಂಟ್ರಿ ಸಮೀಕ್ಷಾ ವರದಿ.

ಸ್ಮಾರ್‍ಟ್‌ಫೋನ್‌ನೊಂದಿಗೆ ಏಕಾಂತವಾಗಿ ಕಾಲ ಕಳೆಯಲು ಅನೇಕರು ತಮ್ಮ ತಂದೆತಾಯಿ, ಅಕ್ಕತಂಗಿ, ಹೆಂಡತಿ, ಮಕ್ಕಳನ್ನು ತಮ್ಮ ಗುರುಗಳನ್ನು ದೂರ ಮಾಡಿಕೊಳ್ಳಲು ಸಿದ್ಧರಾಗಿರುವರು!

ಶೇಕಡಾ ೬೦%ರಷ್ಟು ಜನರು ಸ್ಮಾರ್‍ಟ್‌ಫೋನ್ ಕೈಯಲ್ಲಿಡಿದು ಪಕ್ಕದಲ್ಲಿಟ್ಟುಕೊಂಡು ಮಲಗುವುದಾಗಿ ಹೇಳಿಕೊಂಡಿದ್ದಾರೆ.

ಸ್ನಾನ, ಊಟ, ತಿಂಡಿ ಮಾಡುವಾಗಲೂ ಫೋನ್ ಇರಬೇಕೆಂದೂ ಆರರಲ್ಲಿ ಒಬ್ಬರು ಸಾರಿಕೊಂಡಿದ್ದಾರೆ, ಎಂಥಾ ಅಪಾಯ ಸಂದರ್‍ಭಗಳಾದ ಡ್ರೈವಿಂಗ್, ಈಜು, ಸೈಕಲ್, ಆಟ ಇತ್ಯಾದಿ ವೇಳೆಯಲ್ಲಿ ನಮ್ಮ ಗಮನ ಫೋನ್ ಕಡೆಗೇ ಹೇಗುವುದೆಂದೂ ಶೇಕಡಾ ೫೪% ರಷ್ಟು ಜನರು ಸಾರಿರುವರು!

ಇನ್ನು ಶೇಕಡಾ ೪೦% ರಷ್ಟು ಜನರು ಕೆಲವು ರಹಸ್ಯಗಳು, ಅಂಕಿ‌ಅಂಶಗಳು, ಫೋಟೋಗಳು, ತಂತ್ರಕುತಂತ್ರ, ವೈಯಕ್ತಿಕ ತಾಣಗಳು ಅಲ್ಲಿವೆ. ಹೀಗಾಗಿ ಜೀವದ ಗೆಳೆಯನಿಗಿಂತಲೂ ಜೀವದ ಸ್ಮಾರ್‍ಟ್‌ಫೋನ್ ಮುಂದಿನ ಮಾಯಜಾಲವೆಂದು ಬಹಿರಂಗ ಪಡಿಸಿರುವರು.

ಭವ್ಯಭಾರತದ ಜನವೆಲ್ಲ ಹೀಗಾದರೆ ಮುಂದಿನ ಗತಿ…?!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...