Home / ಲೇಖನ / ಇತರೆ / ಲಡ್ಡಿನ ಮಹಿಮೆ

ಲಡ್ಡಿನ ಮಹಿಮೆ

ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ವಿತರಿಸುವ ಲಡ್ಡಿನ ಮಹಿಮೆ ಅಪಾರ. ನಾನು ೧೯೯೧ರಿಂದ ಈತನಕ ಹತ್ತಾರು ಸಲ ಹೋಗಿ ಬಂದಿದ್ದೇನೆ.

ಒಮ್ಮೆ- ಬರಿಗಾಲಲ್ಲಿ ಬೆಟ್ಟ ಹತ್ತಿ ಇಳಿದಿದ್ದುಂಟು. ಪ್ರಕೃತಿ ಸೌಂದರ್ಯ ಆಸ್ವಾದಿಸಿದ್ದುಂಟು.

ನನ್ನ ಕಣ್ಣ ಮುಂದೆ ನಿತ್ಯ ಸುತ್ತ ಸುಳಿಯುವುದೆಂದರೆ… ಇಲ್ಲಿನ ಲಡ್ಡು, ಈ ಲಡ್ಡಿನ ಮಹಿಮೆ ಅಪಾರ. ಒಮ್ಮೆ ತಿಂದರೆ ಇನ್ನೊಮ್ಮೆ, ಮತ್ತೊಮ್ಮೆ, ತಿನ್ನಬೇಕೆನಿಸುವುದು!

ವಿದೇಶಿಯರೂ ಇಲ್ಲಿಗೆ ಬಂದು ಹೋಗುವರು…

ನಾನು ಈ ಐದು ದಶಕಗಳಲ್ಲಿ ನೂರಾರು ಕಡೆಗಳಲ್ಲಿ ಲಡ್ಡು ಸವಿದಿದ್ದೇನೆ. ಆದರೆ ತಿರುಪತಿಯ ಲಡ್ಡು ಇದ್ದಂತೇ ಇಲ್ಲವೇ ಇಲ್ಲ! “ಇದೇಕೆ ಇಷ್ಟು ರುಚಿ ಶುಚಿ? ಈ ಲಡ್ಡಿನ ಮಹಿಮೆಯಾದರೂ ಏನು? ಇದರ ಹಿಂದಿರುವ ರಹಸ್ಯವಾದರೂ ಏನು? ಸ್ಥಳ ಮಹಿಮೆಯೇ? ಪಾಕ ಶಾಸ್ತ್ರವೇ?” ಅಧ್ಯಯನ ಯೋಗ್ಯವಾದ ವಸ್ತು ವಿಶೇಷವಾಗಿದೆ.

ಇಲ್ಲಿನ ಲಡ್ಡು ಆಕರ್‍ಷಣೆಯೇ ಸೋಜಿಗವೆನಿಸುವುದು. ಒಂದು ಲಡ್ಡು ಕೈಯಲ್ಲಿಡಿದರೆ ಕೈತುಂಬಾ ೩೦೦ ಗ್ರಾಂ ತೂಕದ್ದು! ಒಂದು ತಿನ್ನಲು ಮುಖ ಉಜ್ಜಿ… ಆಹಾ.. ಸಾಕುಸಾಕಾಗಿ ಬಿಡುವುದು. ಕೈಬಾಯೆಲ್ಲ ಸುವಾಸನೆ ಘಮ-ಘಮ ಪರಿಮಳ ಬೀರುವುದು! ಒಂದೇ ಸಾರಿ ಎರಡು ಲಡ್ಡುಗಳನ್ನು ಬಿಡದೆ ಪ್ರತಿ ಸಾರಿ ಸವಿದಿದ್ದೇನೆ. ಯಾವುದೇ ರೀತಿಯ ಅಡ್ಡ ಪರಿಣಾಮ ಕಂಡು ಬಂದಿಲ್ಲ! ಸಕ್ಕರೆ ರೋಗವನ್ನು ಹತೋಟಿಗೆ ತಂದಿದೆ. ರಕ್ತದೊತ್ತಡವನ್ನು ಸರಿದೂಗಿಸಿದೆ. ಹಸಿವು ಹೆಚ್ಚಿಸಿದೆ. ಉಲ್ಲಾಸ ಉತ್ಸಾಹ ಹೆಚ್ಚಿಸಿದೆ. ಇನ್ನೊಂದು ಲಡ್ಡು ತಿನ್ನಬೇಕೆಂಬಾಸೆ ಮೂಡಿದೆ.

ಲಡ್ಡಿನ ವಾಸನೆ ಕಿಲೋಮೀಟರ್‌ವರೆಗೂ ವ್ಯಾಪಿಸಿದೆ. ಅದರಲ್ಲಿ ರಾಶಿರಾಶಿ ಕಲ್ಲುಸಕ್ಕರೆ, ಬಾದಾಮಿ, ಉತ್ತೂತ್ತಿ, ದ್ರಾಕ್ಷಿ, ಗೋಡಂಬಿ, ಏಲಕ್ಕಿ, ಬೆಲ್ಲ, ತುಪ್ಪ, ಲವಂಗ ಒಣಕೊಬ್ಬರಿ.. ಗುಲ್ಕನ್… ಅಬ್ಬಾಬ್ಬಾ… ಏನೆಲ್ಲ ಹಾಕಿ ತಯಾರಿಸಿದ ಲಡ್ಡು ವಾರವಿಟ್ಟರೂ ಕೆಡದಂತೆ ಉಳಿಯುವ ಮಹಿಮೆ ಬಣ್ಣಿಸಲು ಅಸಾಧ್ಯ! ತಿನ್ನಬೇಕು ತಿಂದು ಅದರ ಸವಿ ಸವಿಯಬೇಕು. ಒಮ್ಮೆ ಶ್ರೀಮಹಾವಿಷ್ಣುವೇ ಭಕ್ತನ ವೇಷದಲ್ಲಿ ಬಂದು ಲಡ್ಡು ಸವಿದನೆಂಬ ಕಥೆಯೇ ಉಂಟು! ಅಷ್ಟು ವಿಶ್ವವಿಖ್ಯಾತಿ….

ಈ ಲಡ್ಡಿಗೊಂದು ಇತಿಹಾಸವಿದೆ. ಇದನ್ನು ಜನರಿಗೆ ಪ್ರಸಾದವಾಗಿ ದಿನಾಂಕ ೦೨-೦೮-೧೭೧೫ರಂದು ಆರಂಭಿಸಿದ್ದು ಈಗ ೩೦೦ ವರ್ಷಗಳ ಇತಿಹಾಸವನ್ನು ಸಾರುವುದು.

ಪ್ರತಿನಿತ್ಯ ೬೫೦ ಜನರು ೩೦೦ ಜನ ಪರಿಣಿತ ಅಡಿಗೆ ಭಟ್ಟರೂ ಸೇರಿ ಸುಮಾರು ೩ ಲಕ್ಷ ಲಡ್ಡುಗಳನ್ನು ತಯಾರಿಸುವರು. ೨೦೧೪ನೇ ಸಾಲಿನಲ್ಲಿ ೯೦ ದಶಲಕ್ಷ ಲಡ್ಡು ಖರ್‍ಚಾಗಿದೆ.

ಬ್ರಹೋತ್ಸವದ ಕಾಲದಲ್ಲಿ ೧.೮ ದಶಲಕ್ಷ ಲಡ್ಡುಗಳು ಖರ್‍ಚಾಗುತ್ತವೆ.

ಒಂದು ಲಡ್ಡುವಿಗೆ ೨೫ ರೂಪಾಯಿಗಳಷ್ಟು ಖರ್‍ಚು ಬರಬರುವುದು. ಆದರೆ ದೇವಸ್ಥಾನದ ಕಮಿಟಿಯವರು ಭಕ್ತ ಜನರಿಗೆ ರೂಪಾಯಿ ೧೦ರಂತೇ ಎರಡು ಲಡ್ಡು ನೀಡುತ್ತಿರುವರು.

೨೦೧೫-೧೬ನೆಯ ಸಾಲಿನಲ್ಲಿ ಬರೀ ಲಡ್ಡು ಮಾರಾಟದಿಂದಲೇ ೨೦೦ ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆಯಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...