ಸೌಂದರ್‍ಯಾರಾಧಕ

ಏಳೇಳು ಚಲುವತಿಯೆ! ನಿನಗಾಗಿ ತವಕಿಸುತ
ನಿಂತಿಹರು ಯೋಗಿಗಳು, ಪಂಧವನೆ ತೊಟ್ಟಿಹರು
ಕವಿವರರು ನಿನ್ನ ನೋಡುವದೆಂದು, ಬಿಟ್ಟಿಹರು
ದೆಸೆದೆಸೆಗೆ ಬೆಳಕಿನಂಬುಗಳನ್ನು ಚದರಿಸುತ
ಕತ್ತಲೆಯನರಸಿಗರು ತಾರೆಗಳು ಚಮಕಿಸುವ
ತಮ್ಮ ಕಿರುವೆರಳನ್ನು, ನಲಿಯುವವು. ಮೆಟ್ಟಿಹರು
ಪಾಮರರು ಸಲ್ಲದಾಸೆಯ, ಬೀಡುಬಿಟ್ಟಹರು
ಮುಗಿಲಮಂಡಲದಾಚೆ ಕನಸಿಗರು ರೋಧಿಸುತ.

ನಿನ್ನ ಬರವಿಂದೆನ್ನ ಹೃದಯಮಂದಿರವು ಸಹ
ವಿಮಲವಿರಬಹುದೆಂದು ಕಾಯುವೆನು. ಎಲೆ ಚೆಲುವೆ!
ಇರಬಹುದು ಕೆಲವರೊರೆವಂತೆ ನೀ ಬರಿ ಕನಸು.
ನಿತ್ಯಳೆಂದುಸಿರುತಿರು; ಅಡಗಲೆನ್ನಯ ದಾಹ
ನಾನು ಜೀವಿಸುವನಕ ಇಂತೆಸಗು; ಮರು ಕ್ಷಣವೆ
ನೀನಿಹುದು ಶುದ್ಧ ಸುಳ್ಳೆಂದು ಡಂಗುರ ಹೊಯಿಸು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಲುಮೆ @ ೧೪
Next post ಕಾಡುತಾವ ನೆನಪುಗಳು – ೧೩

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…