Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಜಾಳು ಬೀಳಾಗಿ ಹಳೆನಾತ ಹೊಡೆಯುವೀ ಅಷಡ್ಡಾಳ ಬಟ್ಟೆಗಳ
ಕಿತ್ತೊಗೆದು ಮೈಗೊಪ್ಪವಾಗೊಪ್ಪುವಂಗಿಗಳ ತೊಡಿಸೋ
ಮರಗಟ್ಟದ ತೊಗಲುಗಳಲ್ಲಿ ಸಂವೇದನೆಯ ಮೊಳೆಸಿ
ರೋಮಾಂಚನವ ಚಿಗುರಿಸಿ
ರಂದ್ರರಂದ್ರವ ಬಯಲಗಾಳಿಗೆ ತೆರೆಸೋ
ನೀಲಿಗಟ್ಟಿರುವೀ ಧಮನಿಗಳಲ್ಲಿ
ಕೆಚ್ಚು ರೊಚ್ಚಿನ ಕೆಂಪು ಹರಿಸೋ
ಒಣಗಿ ಬೆಂಡಾಗಿ ಕಳಚಿ ಕುಸಿಯಲನುವಾಗಿರುವಸ್ಥಿ ಪಂಜರದ
ಮೂಲೆ ಮೂಳೆಗಳನ್ನುಕ್ಕುಗೊಳಿಸಿ ಸ್ಥಿರಗೊಳಿಸೋ
ಅಷ್ಟಾವಕ್ರವಾಗಿ ಅಂಕು ಡೊಂಕಾಗಿ ತುಂಡು ತುಂಡಾಗಿ
ಮಬ್ಬು ಮುಚ್ಚಿದೀ ನೋಟಗಳ
ರವಿಕಿರಣದಂತೆ ಸಹಜ ನೇರಗೊಳಿಸಿ ತೇಜಗೊಳಿಸೋ
ಓರೆ ಕೋರೆಗಳನೊಳವೊಗುವಂತೆ ಚೂಪುಗೊಳಿಸೋ
ಜಡತೆ ಜಿದ್ದು ಪಾಚಿಗಟ್ಟಿ
ಕೂಪಸ್ಥ ಬಂಡೆಯಾದ ಈ ಮಂಡೆಗೊಳಗಳ
ತಿಳಿಗೊಳಿಸೂ ಅರಳಿಸೂ ಸಹಸ್ರದಳದರವಿಂದದಂತೆ
ಭಾವದೊರತೆ ಬತ್ತಿ ಬರಡಾದೀ ಹಳ್ಳಗಳಲಿ
ದೇವರಸ ಗಂಗೆಯನುಕ್ಕಿಸಿ
ನಂದನವನವನರಳಿಸಿ ಹಿಗ್ಗಿಸೋ
ಹೊಂಡ ಹೊಂಡಗಳಲ್ಲಿ ಬಿದ್ದು
ತುಂಡು ತುಂಡು ತಿಂಡಿಗೂ ಭಂಟಾಡವಾಡುವೀ
ಕಪ್ಪೆ ಮೀನುಗಳನೆತ್ತೆತ್ತಿ
ವಿಶಾಲಸಾಗರದಲಿಳಿಸಿ ಬಾಳಿಸೊ
ಬೆದರು ಗೊಂಬೆಗಳೀ ಕಿವುಚು ಮೊಗವಾಡಗಳ ಕಳಚಿ
ಸೂರ್ಯ ಬಿಂಬಗಳ ನೈಜ ನಗೆಯ ತುಳುಕಿಸೋ
ಹರಿ ಹರಿದು ಕಚ್ಚಾಡಿ ಹೋರುವೀ ನಾಯಿಹದ್ದುಗಳ
ಉಗುರು ಹಲ್ಲುಗಳ ಕಿತ್ತು
ಸಹಜೀವನಕೆ ಸಾಧುಗೊಳಿಸೋ
ಕೊಳೆತು ನಾರುವೀ ತಿಪ್ಪೆ ಮನಗಳ
ಗುಡಿಸಿ ಸಾರಿಸೀ ಹಸನುಗೊಳಿಸೋ
ತಿಂದು ಮಲಗಿ ಓಡಾಡುವೀ ಬೆಂತರಗಳಲಿ
ಚೇತನದುಸಿರಾಡಿಸೋ
ನೂತನ ಹಸಿರು ಹೂ ಹಣ್ಣು ಕೊಡುವ
ಚಿರಂತನ ಸಿರಿ ಮೂಡಿಸೋ
ಬಿದ್ದವರ ಮಲಗಿರುವವರ
ಮತ್ತೆ ಮತ್ತೆ ಮರೆವಿಗೆ ಸಂದು ಸುಂದಾಗುವವರ
ಕತ್ತಲು ಒತ್ತೆಗೊಂಡವರ ಮಿತ್ತು ತುತ್ತುಗೊಳ್ಳುವವರ
ಎಬ್ಬಿಸೋ ತಂದೆ ಮೇಲೆಬ್ಬಿಸೋ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...