Home / ಕವನ / ಕವಿತೆ / ಅವತಾರಿ ಬರುತ್ತಾನೆ

ಅವತಾರಿ ಬರುತ್ತಾನೆ

ಅವನು ಬರುತ್ತಾನೆ
ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು
ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ
ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ
ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ಮುಳುಗಿಸುತ್ತ
ಬಾಯ ಒರಳಲ್ಲಿ ಹಿರಿಯರನರೆದಾಡುತ್ತ

ಹಲ್ಲ ತೀಟೆಯಲ್ಲಿ ಕಿರಿಯರ ಕೊರೆದು ಸಣ್ಣ ಮಾಡುತ್ತ
ಮೂಗಿನ ನೇರಕ್ಕೆ ಜಗವನಳೆದು ಸೀನಿ ಸುರಿಯುತ್ತ
ಬಡಾಯಿ ಬಾಹುಗಳ ಉದ್ದಗಲಗಳಿಗೆ ಚಾಚಿ ತಬ್ಬಿ
ಹೂಟ್ಟೆಯುಬ್ಬರ ತೋರುತ್ತ ತನ್ನಪ್ಪನೊಬ್ಬನೇ ಪರಮ ಪುರುಷ
ತನ್ನವಗವಳೊಬ್ಬಳೇ ಜಗಮೀರಿದ ಗರತಿ ಎನುತ್ತ

ತನ್ನ ವಂಶ ವೃಕ್ಷಕ್ಕೆ ಅನಾದಿ ಬೀಜದ ಪಾವಿತ್ರ್ಯ ತೋರುತ್ತ
ಹಗಲಿನ ಮುಖಕ್ಕೆ ಕೊಳ್ಳಿ ತೋರಿಸುತ್ತ
ವಿಶ್ವಗೂಢತೆಯ ರೋಮರೋಮಗಳಲ್ಲಿ ತುಂಬಿಕೊಂಡು
ತಾನು ಕುಡಿದೊಂದೆರಡು ಬಾವಿಗಳಲ್ಲಿ ಸಾಗರಗಳ ಮುಕ್ಕಳಿಸುತ್ತ
ತನ್ನ ಬಾಯಲ್ಲೀರೇಳು ಲೋಕಗಳ ಬಿಂಬಿಸಿ
ಕೃಪಾಪೋಷಕ ನಗೆಯಿಂದ ಜಗವ ಪಾವನಗೊಳಿಸಿ

ನಮ್ಮನು ಉದ್ಧರಿಸುಲು ಬರುತ್ತಾನೆ
ಬಂದು ನಿಂತು ಜಗದಗಲ ಮುಗಿಲಗಲವಾದ
ತನ್ನುದರದಡಿಯಲ್ಲಿ ನಮಗೆ ಕಾವು ಕೊಡುತ್ತಾನೆ
ಬೆಚ್ಚಗಿದೆಯೆಂದು ನಾವು ಆಶ್ರಯ ಪಡೆದೆವೋ ಸರಿ
ಕಪ್ಪ ನೆರಳಪುಟ್ಟಿ ನಮ್ಮ ಮುಚ್ಚಿ
ಉಸಿರುಕಟ್ಟಿ ನಾವು ಮೂಕರಾಗಿ
ಬಿಳಿಚಿಕೊಂಡು ಬೆಪ್ಪರಾದರೆ ಅವನ ತಪ್ಪೇ?

ನೋಡು ಅವನು ಬಂದೇ ಬರುತ್ತಾನೆ
ಬಿಡಿಸಿಕೊಳ್ಳಲು ನೀನು ಯತ್ನಿಸಿದಂತೆಲ್ಲಾ
ಪರಲೋಕಕೇರುವ ಪರಿಪೂರ್ಣ ಪವಾಡದೇಣಿಯಿಂದಾದರೂ
ನಿನ್ನ ಸೆಳೆದು ತನ್ನ ಸುತ್ತಲೇ ಜೇಡನಂತೆ ತಿರುಗಾಡಿಸುತ್ತಾ
ಕೊನೆಗೆ ನಿನ್ನ ನುಂಗಿ ನೀರು ಕುಡಿಯುತ್ತಾನೆ
ಸೋಹಮ್ಮೆಂದು ನಿನ್ನ ಸೊನ್ನೆಯಾಗಿಸುತ್ತಾನೆ
ನೀನು ನೀನಾಗುಳಿಯಬೇಕೆಂದರೆ ದೂರ ಓಡು
ಅಗೋ ಬಂದ! ಬಂದೇ ಬರುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...